ವಿಜಯಸಾಕ್ಷಿ ಸುದ್ದಿ, ಗದಗ
ಪ್ರೆಸ್ ಎಂದು ಹೇಳಿಕೊಂಡು ಊರೆಲ್ಲ ಸುತ್ತುತ್ತಿದ್ದ ನಕಲಿ ಪತ್ರಕರ್ತನ ಬೈಕ್ ನ್ನು ಪೊಲೀಸರು ಸೀಜ್ ಮಾಡಿರುವ ಘಟನೆ ನಡೆದಿದೆ. ಕೊರೊನಾದಿಂದಾಗಿ ರಾಜ್ಯದಲ್ಲಿ ಕಠಿಣ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಹೀಗಾಗಿ ಅನಾವಶ್ಯಕವಾಗಿ ಓಡಾಡುತ್ತಿರುವವರ ಬೈಕ್ ಸೀಜ್ ಮಾಡುವಂತೆ ಸರ್ಕಾರ ಸೂಚಿಸಿದೆ. ಆದರೂ ಹಲವರು ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತ ಉದ್ಧಟತನ ಮೆರೆಯುತ್ತಿದ್ದಾರೆ.
ಇದೇ ರೀತಿ ತಿರುಗಾಡುತ್ತಿದ್ದ ನಕಲಿ ಪತ್ರಕರ್ತನಿಗೆ ಪೊಲೀಸರು ಬುದ್ಧಿ ಕಲಿಸಿದ್ದಾರೆ.

ಇಂದು ಕೂಡ ಪೊಲೀಸರು ನಗರದ ವಿವಿಧ ಬಡಾವಣೆಗಳಲ್ಲಿ ಅನಾವಶ್ಯಕವಾಗಿ ಓಡಾಡುತ್ತಿರುವವರ ಬೈಕ್ ಸೀಜ್ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ರೋಡಿಗೆ ಬಂದಿದ್ದ ವ್ಯಕ್ತಿಯೊಬ್ಬ ಪ್ರೆಸ್ ಎಂದು ಸುಳ್ಳು ಹೇಳಿ ಸಿಕ್ಕಿ ಹಾಕಿಕೊಂಡಿದ್ದಾನೆ.
ಪಂಚಾಕ್ಷರಿ ನಗರದ ರಸ್ತೆಯ ಹತ್ತಿರ ಪ್ರೆಸ್ ಎಂದು ಹೇಳಿಕೊಂಡಿದ್ದ ವ್ಯಕ್ತಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ. ಆಗ ಡಿವೈಎಸ್ ಪಿ ವಿಜಯ್ ಬಿರಾದಾರ ಐಡಿ ಕಾರ್ಡ್ ಕೇಳಿದ್ದಾರೆ. ಆಗ ವಾಕ್ ಹೋಗಿದ್ದೆ…ಪ್ರೆಸ್ ಎಂದು ಏನೇನೊ ಹೇಳಿ ಯುವಕ ಸಿಕ್ಕಿ ಬಿದ್ದಿದ್ದಾನೆ. ಪೊಲೀಸರು ಮುಲಾಜಿಲ್ಲದೆ, ಬೈಕ್ ಸೀಜ್ ಮಾಡಿದ್ದಾರೆ.