ಬೆಂಗಳೂರು: ಬಾಲಕಿ ಶವ ಸೂಟ್ಕೇಸ್ನಲ್ಲಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಆರೋಪಿಗಳನ್ನು ಬಂಧಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಬಾಲಕಿಯೊಬ್ಬಳನ್ನು ಹತ್ಯೆಗೈದು, ಸೂಟ್ಕೇಸ್ನಲ್ಲಿ ಶವ ತುಂಬಿ ಎಸೆದಿದ್ದ 7 ಜನ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಿಹಾರದಲ್ಲಿ ಬಂಧಿಸಿದ್ದಾರೆ.
ಆರೋಪಿಗಳನ್ನು ಬೆಂಗಳೂರು ಗ್ರಾಮಾಂತರ ವಿಭಾಗದ ಸೂರ್ಯನಗರ ಪೊಲೀಸರು ಬಿಹಾರದಿಂದ ಕರ್ನಾಟಕಕ್ಕೆ ಕರೆತರುತ್ತಿದ್ದಾರೆ. 7 ರಲ್ಲಿ ಮೂವರ ವಿವರ ಲಭ್ಯವಾಗಿದ್ದು, ಅವರನ್ನು ಆಶಿಕ್ ಕುಮಾರ್, ಮುಖೇಶ್ ಮತ್ತು ರಾಜಾರಾಮ್ ಮೋಹನ್ ಎಂದು ಗುರುತಿಸಲಾಗಿದೆ. ಆಶಿಕ್ ಕುಮಾರ್ ವಿವಾಹಿತನಾಗಿದ್ದು, ಆತನಿಗೆ ಇಬ್ಬರು ಮಕ್ಕಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೇ 21 ರಂದು ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಸೂಟ್ಕೇಸ್ನಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು. ಹತ್ಯೆಯಾದ ಬಾಲಕಿಯನ್ನು ರೀಮಾ ಎಂದು ಗುರುತಿಸಲಾಗಿತ್ತು. ಪ್ರಾಥಾಮಿಕ ತನಿಖೆಯಲ್ಲಿ, ಬೇರೆಡೆ ಕೊಲೆ ಮಾಡಿ, ಶವ ಇಲ್ಲಿ ಎಸೆಯಲಾಗಿದೆ ಎಂದು ತಿಳಿದು ಬಂದಿತ್ತು.ತನಿಖೆ ಕೈಗೊಂಡ ಪೊಲೀಸರು, ಇದೀಗ ಆರೋಪಿಗಳ ಎಡೆಮುರಿ ಕಟ್ಟಿದ್ದು, ತನಿಖೆ ಕೈಗೊಂಡಿದ್ದಾರೆ.