ಕಾಲ್ತುಳಿತ ಕೇಸ್: ಸಿಎಂ ಪಟಲಾಂ ಮಾಡಿದ ಎಡವಟ್ಟಿದು- ಸಚಿವ ವಿ ಸೋಮಣ್ಣ!

0
Spread the love

ಮೈಸೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟ 11 ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Advertisement

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ. ಸೋಮಣ್ಣ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪರಿಹಾರ ಮೊತ್ತ 25 ಲಕ್ಷ ಅಲ್ಲ, ಇಡೀ ಬಜೆಟ್ ಅನ್ನು ಪರಿಹಾರವಾಗಿ ಕೊಟ್ಟರೂ ಹೋಗಿರುವ ಜೀವ ವಾಪಸ್ ಬರುತ್ತಾ!? ಎಂದು ಪ್ರಶ್ನಿಸಿದರು. ಇಡೀ ಘಟನೆಯಿಂದ ಬೆಂಗಳೂರಿಗೆ ಅತ್ಯಂತ ಕೆಟ್ಟ ಹೆಸರು ಬಂದಿದೆ. ಸಿಎಂ ಪಟಲಾಂ ಮಾಡಿದ ಎಡವಟ್ಟಿನಿಂದ ಇಷ್ಟೆಲ್ಲಾ ಘಟನೆಗಳು ನಡೆದಿವೆ. ಸಿದ್ದರಾಮಯ್ಯ ಅವರಿಂದ ನಾವು ಇಂತಹ ಆಡಳಿತ ನಿರೀಕ್ಷೆ ಮಾಡಿರಲಿಲ್ಲ. ನಿಮ್ಮ-ನಿಮ್ಮ ಒಳಜಗಳ, ನಿಮ್ಮ ಒಳ ಒಪ್ಪಂದಗಳು, ನಿಮ್ಮ ನಡುವಿನ ಗೊಂದಲಗಳಿಂದ ಅಮಾಯಕರ ಜೀವ ಹೋಗಿದೆ. ಇದಕ್ಕೆ ಯಾರು ಹೊಣೆ ಮೊದಲು ಹೇಳಿ. ಸಿದ್ದರಾಮಯ್ಯನವರೇ ಇದಕ್ಕೆ ಹೊಣೆ ಅಲ್ವಾ ಎಂದು ವಾಗ್ದಾಳಿ ನಡೆಸಿದರು.

ಕಾಲ್ತುಳಿತ ಘಟನೆಗೆ ಡಾ.ರಾಜ್‌ಕುಮಾರ್ ಅವರ ಸಾವಿನ ಘಟನೆಯನ್ನ ಹೇಗೆ ಹೋಲಿಕೆ ಮಾಡುತ್ತೀರಾ. ರಾಜ್‌ಕುಮಾರ್ ಅವರ ಸಾವಿನ ಸಂದರ್ಭವೇ ಬೇರೆ, ಅವತ್ತಿನ ಪರಿಸ್ಥಿತಿಯೇ ಬೇರೆ ಇವತ್ತಿನ ಪರಿಸ್ಥಿತಿಯೇ ಬೇರೆ. ನೀವು ಈಗ ಮಾಡಿರುವುದು ಪಾಪದ ಕೆಲಸ. ಮೊದಲು ಅದನ್ನು ನೀವು ಒಪ್ಪಿಕೊಳ್ಳಬೇಕು. ಕುರ್ಚಿಗೆ ಅಂಟಿಕೊಂಡು ಸಿದ್ದರಾಮಯ್ಯ ಈ ಮಟ್ಟಕ್ಕೆ ಇಳಿಯುತ್ತಾರೆ ಎಂದು ನಾನು ಅಂದುಕೊಂಡಿರಲಿಲ್ಲ. ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಕೊಟ್ಟಿರುವ ಫ್ರೀ ನೆಸ್ ಬೇರೆ ರಾಜ್ಯದ ಯಾವ ಸಿಎಂಗೂ ಕೊಟ್ಟಿಲ್ಲ. ಆದರೂ ಸಿದ್ದರಾಮಯ್ಯ ಇಂತಹ ಕೆಟ್ಟ ಆಡಳಿತ ನಡೆಸುತ್ತಿದ್ದಾರೆ ಎಂದು ಹರಿಹಾಯ್ದರು.


Spread the love

LEAVE A REPLY

Please enter your comment!
Please enter your name here