ಬೆಂಗಳೂರು: ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಿಯಕರನೋರ್ವ ತನ್ನ ಪ್ರೇಯಸಿಯನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಜರುಗಿದೆ.ಹರಿಣಿ (33) ಕೊಲೆಯಾದ ಮಹಿಳೆ. ಸಾಫ್ಟ್ವೇರ್ ಇಂಜಿನಿಯರ್ ಯಾಗಿರುವ ತಲಘಟ್ಟಪುರದ ನಿವಾಸಿ ಯಶಸ್ (25) ಕೊಲೆ ಆರೋಪಿಯಾಗಿದ್ದು, ಆತನನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಗೃಹಿಣಿ ಹರಿಣಿ ಇದ್ದ ಏರಿಯಾ ಜಾತ್ರೆಗೆ ಟೆಕ್ಕಿ ಯಶಸ್ ಹೋಗಿದ್ದರು. ಈ ವೇಳೆ ಹರಿಣಿ ಪರಿಚಯವಾಗಿ ಫೋನ್ ನಂಬರ್ ಪಡೆದಿದ್ದರು. ಬಳಿಕ ಸ್ನೇಹ ಬೆಳೆದು ಚಾಟಿಂಗ್, ಡೇಟಿಂಗ್, ಸುತ್ತಾಟ ಮಾಡಿದ್ದರು. ಕೆಲವು ಸಲ ಇಬ್ಬರು ಲೈಂಗಿಕ ಸಂಪರ್ಕ ಕೂಡ ಬೆಳೆಸಿದ್ದರು. ಹಲವು ಬಾರಿ ಇದೇ ರೀತಿ ಭೇಟಿಯಾಗಿ ಫೋನ್ನಲ್ಲಿ ಮಾತಾಡುತ್ತಿದ್ದರು. ಈ ವೇಳೆ ಪತಿ ದಾಸೇಗೌಡನಿಗೆ ಪತ್ನಿಯ ಅನೈತಿಕ ಸಂಬಂಧ ಗೊತ್ತಾಗಿತ್ತು. ಹರಿಣಿ ಫೋನ್ ಕಿತ್ಕೊಂಡಿದ್ದ ದಾಸೇಗೌಡ ಮನೆಯಲ್ಲೇ ಕೂಡಿ ಹಾಕಿದ್ದರು.
ಬಳಿಕ ಕೆಲವು ತಿಂಗಳ ನಂತರ ಮತ್ತೆ ಹೊರ ಬಂದಿದ್ದ ಹರಿಣಿ, ಈ ವೇಳೆ ತನ್ನ ಬಾಯ್ಫ್ರೆಂಡ್ ಯಶಸ್ ಸಂಪರ್ಕಿಸಿದ್ದಾರೆ. ಇತ್ತ ಹರಿಣಿ ಸಂಪರ್ಕಕ್ಕೆ ಸಿಗದೇ ಹುಚ್ಚನಂತೆ ಆಗಿದ್ದ ಪ್ರಿಯಕರ ಯಶಸ್, ಸಿಕ್ಕರೆ ಸಾಯಿಸಲು ನಿರ್ಧರಿಸಿದ್ದ. ಹೀಗಾಗಿ ಹರಿಣಿಯನ್ನು ಕೊಲೆ ಮಾಡಲು ಚಾಕು ಕೂಡ ಖರೀದಿಸಿದ್ದ.
ಜೂನ್ 6ರಂದು ಮಾತುಕತೆ ನಡೆಸಿ ಇಬ್ಬರು ಹೋಟೆಲ್ಗೆ ಹೋಗಿದ್ದರು. ಮೊದಲೇ ರಾಯಲ್ಸ್ ಹೋಟೆಲ್ನಲ್ಲಿ ರೂಮ್ ಬುಕ್ ಮಾಡಿದ್ದ ಯಶಸ್, ಹೋಟೆಲ್ಗೆ ಹೋಗಿ ಲೈಂಗಿಕ ಸಂಪರ್ಕ ಬೆಳೆಸಿದ್ದರು. ಬಳಿಕ ಚಾಕುವಿನಿಂದ ಇರಿದು ಹರಿಣಿಯನ್ನು ಹತ್ಯೆಗೈದಿದ್ದಾನೆ. ವಿಷಯ ತಿಳಿದು ಹೋಟೆಲ್ಗೆ ಭೇಟಿ ನೀಡಿದ್ದ ಸುಬ್ರಹ್ಮಣ್ಯಪುರ ಪೊಲೀಸರು, ಬಳಿಕ ಎಫ್ಎಸ್ಎಲ್ ತಂಡ ಕರೆಸಿ ಎಲ್ಲಾ ಸಾಕ್ಷ್ಯ ಸಂಗ್ರಹಿಸಿದ್ದಾರೆ. ಇತ್ತ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಹರಿಣಿ ಅವೈಡ್ ಮಾಡಿದ್ದಕ್ಕೆ ಕೊಲೆ ಮಾಡಿದ್ದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.