ವಿಜಯಸಾಕ್ಷಿ ಸುದ್ದಿ, ಗದಗ: ಇಂಡಿಯನ್ ಪೊಲಿಟಿಕಲ್ ಕಾಂಗ್ರೆಸ್ ಪಕ್ಷಕ್ಕೆ ಸಮಾಜ ಸೇವಕರಾದ ಹೀರಾಲಾಲ್ ಸಿಂಗ್ರಿಯವರು ಗದಗ ಶಹರ ಅದ್ಯಕ್ಷರಾಗಿ ಸೇರ್ಪಡೆಗೊಂಡಿದ್ದಾರೆ. ಅವರಿಗೆ ರಾಜ್ಯಾಧ್ಯಕ್ಷ ಎಸ್.ಎಸ್. ರಡ್ಡೇರ ನೇಮಕಾತಿ ಪತ್ರ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಎಸ್.ಎಸ್. ರಡ್ಡೇರ ಮಾತನಾಡಿ, ಐಪಿಎಲ್ ವಿಜಯೋತ್ಸವದ ಆರ್ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ 11 ಅಭಿಮಾನಿಗಳು ಕಾಲ್ತುಳಿತಕ್ಕೆ ಬಲಿಯಾದದ್ದು ದುಃಖದ ಸಂಗತಿ. ಈ ಘಟನೆಗೆ ಕಾರಣವಾದ ಸರಕಾರ ತಕ್ಷಣವೇ ವಿಸರ್ಜನೆಯಾಗಬೇಕು ಎಂದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಚ.ರಾಮನಕೊಪ್ಪ ಮಾತನಾಡಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸರಕಾರವೇ ನೇರ ಕಾರಣ ಎಂದರು.
ಈ ಸಂದರ್ಭದಲ್ಲಿ ಶಿವಾನಂದಯ್ಯ ಹಿರೇಮಠ, ಉಮೇಶ ಕೋನರೆಡ್ಡಿ, ಪ್ರಭಾಕರ್ ಹೆಬಸೂರ, ರಾಮು ಪಿ.ಬಳ್ಳಾರಿ, ವೆಂಕಟೇಶ ಬಳ್ಳಾರಿ. ಷಣ್ಮುಖ ಸುಲಾಖೆ ಸೇರಿದಂತೆ ಪಕ್ಷದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.