ಬೆಂಗಳೂರು: ಜೂನ್ 4, 2025. ಕರ್ನಾಟಕದ ಪಾಲಿಗೆ ಕರಾಳ ದಿನ. ಫ್ರೀ ಪಾಸ್ ಪೋಸ್ಟ್ ನೋಡಿ ಚಿನ್ನಸ್ವಾಮಿ ಸ್ಟೇಡಿಯಂಗೆ ನುಗ್ಗಿದ್ದ ಲಕ್ಷ ಲಕ್ಷ ಅಭಿಮಾನಿಗಳಿಗೆ ಆ ಜಾಗದಲ್ಲಿ ಅಕ್ಷರಶಃ ನರಕ ದರ್ಶನವಾಗಿತ್ತು. ಅದೇ ಜಾಗದಲ್ಲಿ 11 ಮಂದಿ ಒದ್ದಾಡಿ ಒದ್ದಾಡಿ ಪ್ರಾಣ ಬಿಟ್ಟಿದ್ರು.
ಇಷ್ಟೆಲ್ಲಾ ದುರಂತಕ್ಕೆ ಸಾಕ್ಷಿಯಾದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಪಂದ್ಯಗಳನ್ನ ಬಿಸಿಸಿಐ ಬೇರೆಡೆ ಸ್ಥಳಾಂತರ ಮಾಡಿದೆ. ದುರಂತದ ಬಳಿಕ ಬಿಸಿಸಿಐ ಪಂದ್ಯಗಳ ಸ್ಥಳಾಂತರಕ್ಕೆ ಮುಂದಾಗಿದೆ.
ನವೆಂಬರ್ 13 ರಿಂದ 19ರವರೆಗೆ ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಭಾರತ ಎ ಮತ್ತು ಸೌಥ್ ಆಫ್ರಿಕಾ ಎ ನಡುವಣ ಪಂದ್ಯಗಳ ಆಯೋಜನೆ ಮಾಡಲಾಗಿತ್ತು. ಆದರೆ ಆರ್ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ನಡೆದ ದುರಂತ ಬಳಿಕ ಬಿಸಿಸಿಐ ಬೆಂಗಳೂರಿನಿಂದ ರಾಜ್ ಕೋಟ್ಗೆ ಪಂದ್ಯಗಳನ್ನು ಸ್ಥಳಾಂತರ ಮಾಡಿದೆ.
ನವೆಂಬರ್ನಲ್ಲಿ ಮೂರು ಏಕದಿನ ಪಂದ್ಯಗಳು ನಡೆಯಬೇಕಿತ್ತು. ಆದರೆ ಈಗ ಬೆಂಗಳೂರಿನಿಂದ ರಾಜ್ ಕೋಟ್ಗೆ ಪಂದ್ಯಗಳು ಸ್ಥಳಾಂತರ ಆಗಿದ್ದು, ಈ ಬಗ್ಗೆ ನಿರ್ದಿಷ್ಟ ಕಾರಣ ನೀಡದ ಬಿಸಿಸಿಐ, ಪಂದ್ಯ ಸ್ಥಳಾಂತರ ಬಗ್ಗೆಯಷ್ಟೇ ಮಾಹಿತಿ ನೀಡಿದೆ.