ನಿಮ್ಮ ಕ್ರೆಡಿಟ್ ವಾರ್‌ನಿಂದ 11 ಅಮಾಯಕರು ಬಲಿಯಾಗಿದ್ದಾರೆ: ಸಿಟಿ ರವಿ ವಾಗ್ದಾಳಿ !

0
Spread the love

ಬೆಂಗಳೂರು:- ನಿಮ್ಮ ಕ್ರೆಡಿಟ್ ವಾರ್‌ನಿಂದ 11 ಅಮಾಯಕರು ಬಲಿಯಾಗಿದ್ದಾರೆ ಎಂದು ಚಿನ್ನಸ್ವಾಮಿ ಕಾಲ್ತುಳಿತ ದುರಂತ ಉಲ್ಲೇಖಿಸಿ ರಾಜ್ಯ ಸರ್ಕಾರದ ವಿರುದ್ಧ ಸಿಟಿ ರವಿ ವಾಗ್ದಾಳಿ ಮಾಡಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿನವರೇ ಸಿಕ್ಸ್, ಫೋರ್ ಹೊಡೆದು ಆರ್‌ಸಿಬಿಯನ್ನು ಗೆಲ್ಲಿಸಿದಂತೆ ವಿಜಯೋತ್ಸವದ ವೇಳೆ ಅವರಿಗೆ ಆತುರ ಇತ್ತು. ಡಿಕೆಶಿ ಬೌಲರ್, ಸಿದ್ದರಾಮಯ್ಯನವರೇ ಬ್ಯಾಟ್ಸ್ಮನ್, ಪರಮೇಶ್ವರ್ ವಿಕೆಟ್ ಕೀಪರ್ ಎಂಬಂತೆ ನಿಮ್ಮ ವರ್ತನೆ ಇತ್ತು. ಆರ್‌ಸಿಬಿ ತಂಡದ ಗೆಲುವಿಗೆ ನೀವೇ ಪಾತ್ರಧಾರಿಗಳೆಂಬಂತೆ ನಿಮ್ಮ ವ್ಯವಹಾರ ಇತ್ತು. ನಿಮ್ಮ ಆತುರ, ಕ್ರೆಡಿಟ್ ವಾರ್‌ನಿಂದ 11 ಅಮಾಯಕರು ಬಲಿಯಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Advertisement

ಆಗ ಆತುರ ಮಾಡಿ, ಈಗ ಕೋರ್ಟಿಗೆ 2 ತಿಂಗಳು ಬೇಕೆಂದು ಕೇಳುತ್ತಿರುವುದೇಕೆ? ಮಾಹಿತಿಯನ್ನು ರಿ-ರೈಟ್ ಮಾಡಬೇಕೇ? ಯಾವ ಕಾರಣಕ್ಕೆ 2 ತಿಂಗಳು ಕೇಳುತ್ತೀರಿ? 2 ದಿನದಲ್ಲಿ ಕೊಡಿ ಎಂದು ನ್ಯಾಯಾಲಯ ಸರಿಯಾಗಿ ಹೇಳಿದೆ. ಎಲ್ಲವೂ ಸಿದ್ಧವಿರುವಾಗ 2 ದಿನವೂ ಬೇಕಿರಲಿಲ್ಲ. ಈಗ ಕೋರ್ಟಿಗೆ ಉತ್ತರ ನೀಡಲು 2 ತಿಂಗಳು ಕೇಳಿದ್ದು, ಜನಮಾನಸದಿಂದ ಮರೆಯಾಗಲಿ ಎಂಬ ಕಾರಣಕ್ಕೆ ಹೀಗೆ ಕೇಳಿದ್ದಾರಾ? ಇಷ್ಟೇ ತಾಳ್ಮೆಯನ್ನು ಬಳಸಿ 2 ದಿನ ತೆಗೆದುಕೊಂಡಿದ್ದರೆ, ಕಾರ್ಯಕ್ರಮವೂ ಚೆನ್ನಾಗಿ ಆಗುತ್ತಿತ್ತು. ರಾಜ್ಯದ ಮರ್ಯಾದೆಯೂ ಉಳಿಯುತ್ತಿತ್ತು. 11 ಜನರ ಜೀವವೂ ಉಳಿಯುತ್ತಿತ್ತು ಎಂದರು.


Spread the love

LEAVE A REPLY

Please enter your comment!
Please enter your name here