ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಜೂನ್ 14ರಂದು ತೋಂಟದ ಸಿದ್ಧಲಿಂಗ ಶ್ರೀಗಳ ಕನ್ನಡ ಭವನ, ಕಸಾಪ ಕಾರ್ಯಾಲಯದಲ್ಲಿ ಸಂಜೆ 6.30 ಗಂಟೆಗೆ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
2025ರ ಬೂಕರ್ ಪ್ರಶಸ್ತಿಗೆ ಭಾಜನವಾದ ಬಾನು ಮುಷ್ತಾಕ್ ಅವರು ರಚಿಸಿದ ಸಣ್ಣ ಕತೆಗಳ ಸಂಕಲನ ‘ಎದೆಯ ಹಣತೆ’ ಪುಸ್ತಕ ಕುರಿತು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದ ಸಂಶೋಧಕ ಮಂಜುನಾಥ ಕರಿಲಿಂಗಣ್ಣವರ ಉಪನ್ಯಾಸ ನೀಡುವರು. ಅಧ್ಯಕ್ಷತೆಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ವಹಿಸುವರು.
ಕಾರ್ಯಕ್ರಮದಲ್ಲಿ ಪರಿಷತ್ತಿನ ಎಲ್ಲ ಸದಸ್ಯರು, ಸಾಹಿತಿಗಳು, ಕನ್ನಡಾಭಿಮಾನಿಗಳು ಭಾಗವಹಿಸಬೇಕೆಂದು ಕಿಶೋರಬಾಬು ನಾಗರಕಟ್ಟಿ, ದತ್ತಪ್ರಸನ್ನ ಪಾಟೀಲ, ಡಿ.ಎಸ್. ಬಾಪುರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.



