ಮೈಸೂರಿಗೆ 5 ರೂಪಾಯಿ ಕೆಲಸ ಮಾಡಿಲ್ಲ ಸಿಎಂ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ

0
Spread the love

ಮೈಸೂರು: ಮೈಸೂರಿಗೆ 5 ರೂಪಾಯಿ ಕೆಲಸ ಮಾಡಿಲ್ಲ ಸಿಎಂ ಸಿದ್ದರಾಮಯ್ಯ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಎಂಬುದು ಸಿದ್ದರಾಮಯ್ಯ ದೃಷ್ಟಿಕೋನದಲ್ಲೇ ಇಲ್ಲ. ಅವರದ್ದೇನಿದ್ದರೂ ಕುರ್ಚಿ ಉಳಿಸಿಕೊಳ್ಳುವ ತಂತ್ರದ ರಾಜಕಾರಣ ಅಷ್ಟೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisement

ಲಿಂಗಾಯತರು ವಿರೋಧ ಮಾಡಿದರು. ಹಾಗಾಗಿ ಮತ್ತೊಮ್ಮೆ ಜಾತಿಗಣತಿ ಮಾಡುತ್ತೇವೆ ಎನ್ನುತ್ತಾರೆ. 39 ಜನ ಶಾಸಕರು ಲಿಂಗಾಯತರು ಇದ್ದಾರೆ. ಸಿದ್ದರಾಮಯ್ಯ ತಮ್ಮ ಸಿಎಂ ಕುರ್ಚಿ ಬಿಟ್ಟು ಕೊಡುತ್ತಾರಾ? ವಿರೋಧ ಇದ್ದರೆ ಕುರ್ಚಿ ಬಿಟ್ಟು ಕೊಡಲಿ ಎಂದರು.

ಯತೀಂದ್ರ ಸಿದ್ದರಾಮಯ್ಯ ತಮ್ಮ ಹುಳುಕು ಮುಚ್ಚಿಕೊಳ್ಳಲು ಏನೇನೋ ಹೇಳುತ್ತಿದ್ದಾರೆ. ನಿಮ್ಮ ಹುಳುಕು ಮುಚ್ಚಿಕೊಳ್ಳಲು ಏನೇನೋ ಹೇಳಬೇಡಿ. ಸಿಎಂ ಸಿದ್ದರಾಮಯ್ಯ 150 ಕೋಟಿ ವ್ಯಯ ಮಾಡಿ ಕಾಟಾಚಾರಕ್ಕೆ ಗಣತಿ ಮಾಡಿದ್ದರು.

ಇದನ್ನು ಬಿಜೆಪಿ, ಜೆಡಿಎಸ್ ವಿರೋಧ ಮಾಡಿತು. ಇದು ಅವೈಜ್ಞಾನಿಕ ಅಂತ ಎಲ್ಲರಿಗೂ ಗೊತ್ತಿತ್ತು. ಈಗ ರಾಹುಲ್ ಗಾಂಧಿ ಭೇಟಿ ಮಾಡಿದ ಬಳಿಕ ಮತ್ತೊಂದು ಬಾರಿ ಸಮೀಕ್ಷೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದರಿಂದ 150 ಕೋಟಿ ಹಣ ವ್ಯರ್ಥವಾಗಿದೆ ಎಂದು ಕಿಡಿಕಾರಿದ್ದಾರೆ.


Spread the love

LEAVE A REPLY

Please enter your comment!
Please enter your name here