ಹಾಸನ:- ಭಾರೀ ಗಾಳಿ-ಮಳೆಗೆ ಬೃಹತ್ ಮರವೊಂದು ನೆಲಕ್ಕೆ ಉರುಳಿ ಬಿದ್ದಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಶಿರಾಡಿಘಾಟ್ ನ ದೊಡ್ಡತಪ್ಲು ಬಳಿ ಜರುಗಿದೆ. ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಅದರಂತೆ ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿದ ಭಾರೀ ಮಳೆಯಿಂದ ಈ ಅವಘಡ ಸಂಭವಿಸಿದೆ.
Advertisement
ಮರದ ಜೊತೆ ಮಣ್ಣು ಕುಸಿದು ಸಂಚಾರ ಸ್ಥಗಿತಗೊಂಡಿತ್ತು. ಸೋಮವಾರ ರಾತ್ರಿ 3 ಗಂಟೆಗೂ ಅಧಿಕ ಸಮಯ ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ಬಂದ್ ಆಗಿತ್ತು. ಮುಂಜಾನೆ ವರೆಗೂ ರಕ್ಷಣಾ ಸಿಬ್ಬಂದಿ ಮರ ಹಾಗೂ ಮಣ್ಣು ತೆರವು ಮಾಡಿತ್ತು. ಬಳಿಕ ಬೆಳಿಗ್ಗೆ 7 ಗಂಟೆಯಿಂದ ಮತ್ತೆ ಎಂದಿನಂತೆ ವಾಹನ ಸಂಚಾರ ಆರಂಭವಾಗಿದೆ.