ಭಾರೀ ಮಳೆ: ಮಡಿಕೇರಿ ತ್ರಿವೇಣಿ ಸಂಗಮ ಮುಳುಗಡೆ! ಸಂಪರ್ಕ ಸ್ಥಗಿತವಾಗುವ ಆತಂಕ!

0
Spread the love

ಕೊಡಗು:ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ಮಡಿಕೇರಿ ತ್ರಿವೇಣಿ ಸಂಗಮ ಮುಳುಗಡೆಯಾಗಿದೆ. ಹೀಗಾಗಿ ಸಂಪರ್ಕ ಸ್ಥಗಿತವಾಗುವ ಆತಂಕ ಜನರಲ್ಲಿ ಮೂಡಿದೆ.

Advertisement

ಬ್ರಹ್ಮಗಿರಿ ಬೆಟ್ಟ, ತಲಕಾವೇರಿ ವ್ಯಾಪ್ತಿಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಕಾವೇರಿ, ಕನ್ನಿಕೆ ಸುಜ್ಯೋತಿ ನದಿಗಳು ನದಿಗಳು ತುಂಬಿ ಹರಿಯುತ್ತಿವೆ. ಇನ್ನು, ತ್ರಿವೇಣಿ ಸಂಗಮದಲ್ಲಿ ಹೊಸದಾಗಿ ನಿರ್ಮಾಣ ಮಾಡಿರುವ ಉದ್ಯಾನವನ ಸಂಪೂರ್ಣ ಮುಳುಗಡೆ ಆಗಿದೆ..ಇದೇ ರೀತಿ ಮಳೆ ಮುಂದುವರಿದಲ್ಲಿ ಭಗಂಡೇಶ್ವರ ದೇವಾಲಯದ ಮುಂಭಾಗದ ಆವರಣಕ್ಕೂ ನೀರು ನುಗ್ಗುವ ಸಾಧ್ಯತೆ ಇದೆ.

ಯಾಕೆಂದರೆ ಕಾವೇರಿ ಕನ್ನಿಕೆ ಸುಜ್ಯೋತಿ ನದಿಗಳ ನೀರಿನ ಮಟ್ಟ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಿದೆ. ಇದೇ ರೀತಿ ಮಳೆಯಾದರೆ, ನಾಪೋಕ್ಲು ಅಯ್ಯಗೇರಿ, ಬಾಗಮಂಡಲ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇದೆ.


Spread the love

LEAVE A REPLY

Please enter your comment!
Please enter your name here