ಬೆಂಗಳೂರು:– ಗುರುವಾರ ವಿಚಾರಣೆಗೆ ಹಾಜರಾಗಲು ಇಡಿಯಿಂದ ಸಮನ್ಸ್ ಬಂದಿದೆ ಎಂದು ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ.
Advertisement
ನಗರದಲ್ಲಿ ಮಾತನಾಡಿದ ಅವರು, ಐಶ್ವರ್ಯ ಗೌಡ ಪ್ರಕರಣದಲ್ಲಿ ಇಡಿ ಸಮನ್ಸ್ ಬಂದಿದ್ದು, ಗುರುವಾರ ವಿಚಾರಣೆಗೆ ಬರಲು ಹೇಳಿದ್ದಾರೆ. ಇಂದು ಮಧ್ಯಾಹ್ನ 12:30ಕ್ಕೆ ಇಡಿಯವರು ಬಂದು ಸಮನ್ಸ್ ನೀಡಿದ್ದಾರೆ. ನಾನು ಹೊರಗೆ ಹೋಗಿದ್ದೆ. ಇಡಿಯವರು ಬಂದಿದ್ದಾರೆ ಎಂದು ಗೊತ್ತಾದ ಮೇಲೆ ಬಂದೆ ಅವರು ಸಮನ್ಸ್ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.
ಸಮನ್ಸ್ನಲ್ಲಿ ಯಾವ ಪ್ರಕರಣ ಅಂತ ಇಲ್ಲ. ಆದರೆ ದಾಖಲಾತಿ ನೋಡಿದಾಗ ಈ ಪ್ರಕರಣ ಅಂತ ಗೊತ್ತಾಯ್ತು. ಗುರುವಾರ ವಿಚಾರಣೆಗೆ ಬನ್ನಿ ಅಂದಿದ್ದಾರೆ. ಆದರೆ ಪೂರ್ವ ನಿಯೋಜಿತ ಕಾರ್ಯಕ್ರಮ ಇದೆ. ಅದಕ್ಕೆ ಸೋಮವಾರ ಬರುತ್ತೇನೆ ಎಂದು ಮೌಖಿಕವಾಗಿ ತಿಳಿಸಿದ್ದೇನೆ. ಈಗ ಮೇಲ್ ಮೂಲಕ ಅಧಿಕೃತವಾಗಿ ತಿಳಿಸುತ್ತಿದ್ದೇನೆ ಎಂದಿದ್ದಾರೆ.