ನವದೆಹಲಿ: ಜ್ವಾಲಾಮುಖಿ ಸ್ಫೋಟಗೊಂಡು ದೆಹಲಿಯಿಂದ ಬಾಲಿ ವಿಮಾನ ನಿಲ್ದಾಣದತ್ತ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಗೆ ಮರಳಿರುವ ಘಟನೆ ಇಂಡೋನೇಷ್ಯಾದ ಬಾಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಡೆದಿದೆ. ವಿಮಾನ ದೆಹಲಿಯಲ್ಲಿ ಸುರಕ್ಷಿತವಾಗಿ ಇಳಿದಿದ್ದು, ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವಿಮಾನಯಾನ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಎಐ21145 ಏರ್ ಇಂಡಿಯಾ ವಿಮಾನ ಇಂದು ದೆಹಲಿಯಿಂದ ಬಾಲಿಗೆ ಪ್ರಯಾಣ ಬೆಳೆಸಿತ್ತು. ಆದರೆ, ಬಾಲಿ ನಿಲ್ದಾಣದ ಸಮೀಪದಲ್ಲೇ ಜ್ವಾಲಾಮುಖಿ ಸ್ಫೋಟಗೊಂಡಿದ್ದು, ಸುರಕ್ಷತೆಯ ದೃಷ್ಟಿಯಿಂದ ವಿಮಾನವನ್ನು ವಾಪಸ್ ಕರೆಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದೆ.
ಬಾಲಿಗೆ ಹೊರಟ ಪ್ರಯಾಣಿಕರಿಗೆ ದೆಹಲಿಯಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದ್ದು, ಪ್ರಯಾಣದ ಸಂಪೂರ್ಣ ವೆಚ್ಚವನ್ನು ಹಿಂದುರುಗಿಸುವುದು ಅಥವಾ ಉಚಿತ ಮರು ಪ್ರಯಾಣದ ಹೊಂದಾಣಿಕೆ ನಡೆಸುವ ಆಯ್ಕೆ ನೀಡಲಾಗುವುದು ಎಂದು ವಿಮಾನಯಾನ ಸಂಸ್ಥೆ ಹೇಳಿದೆ.