ಕೌಟುಂಬಿಕ ಕಲಹಕ್ಕೆ ವಿಷ ಕುಡಿದು ಸೂಸೈಡ್: ರೈತ ಮಹಿಳೆ ಎಂದು 5 ಲಕ್ಷ ಪರಿಹಾರ ಪಡೆದು ಸರ್ಕಾರಕ್ಕೆ ವಂಚಿಸಿದ ಕುಟುಂಬಸ್ಥರು!

0
Spread the love

ಯಾದಗಿರಿ:- ಹಣ ಅಂದ್ರೆ ಹೆಣನೂ ಬಾಯಿ ಬಿಡುತ್ತೆ ಎಂಬ ಗಾದೆ ಮಾತು ಸುಳ್ಳಲ್ಲ ಮರ್ರೆ. ಹಣಕ್ಕಾಗಿ ಕೆಲವು ಜನ ಯಾವ ಮಟ್ಟಕ್ಕಾದ್ರೂ ಹೋಗ್ತಾರೆ. ಇದೀಗ ನಾವು ಅಂತದ್ದೇ ಸ್ಟೋರಿಯನ್ನು ಹೇಳ್ತಿದ್ದೇವೆ ಕೇಳಿ. ಜಿಲ್ಲೆಯ ಸುರಪುರ ತಾಲೂಕಿನ ದಂಡ ಸೊಲಾಪುರ ತಾಂಡಾದಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿ ಹೆಸರಲ್ಲಿ ರೈತ ಮಹಿಳೆ ಆತ್ಮಹತ್ಯೆ ಎಂದು ಕುಟುಂಬಸ್ಥರೇ ಐದು ಲಕ್ಷ ರೂ ಪರಿಹಾರ ಪಡೆದು ಸರ್ಕಾರಕ್ಕೆ ವಂಚನೆ ಮಾಡಿರುವಂತಹ ಘಟನೆ ನಡೆದಿದೆ.

Advertisement

2023 ಅಕ್ಟೋಬರ್‌ 7 ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇದು ಸಹಜ ಸಾವಲ್ಲ, ಹಿಂಸೆ ನೀಡಿ ಪ್ರಚೋದನೆಯಿಂದ ಸಾವಾಗಿದೆ ಎಂದು ಬಂಜಾರ ಮುಖಂಡರು ಆರೋಪಿಸಿದ್ದು, ತನಿಖೆ ಮಾಡಿ ಕಾರಣರಾದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಮೋನಾಬಾಯಿ ಪುನಿಮ್ ಚಂದ್ ಆತ್ಮಹತ್ಯೆ ಮಾಡಿಕೊಂಡ ಯುವತಿ. ಮೃತ ಮೋನಾಬಾಯಿಗೆ ಸಂತೋಷ್, ಠಾಕೂರ್ ಮತ್ತು ಗೇನುಸಿಂಗ್ ಎಂಬ ಮೂವರು ಅಣ್ಣಂದಿರಿದ್ದಾರೆ. ಶೀಲಾಭಾಯಿ, ಪದ್ಮಾವತಿ‌ ಮತ್ತು ಸರಸ್ವತಿ ಎಂಬ ಮೂವರು ಅತ್ತಿಗೆಯರಿದ್ದಾರೆ. ಇವರೇ ಆಕೆಗೆ ದೈಹಿಕ, ಮಾನಸಿಕ ಹಿಂಸೆ ನೀಡಿದ್ದಲ್ಲದೆ ಹೊಡೆದಿರುವ ಶಂಕೆ ವ್ಯಕ್ತವಾಗಿದ್ದು, ನಿರಂತರ ಕಿರಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅನುಮಾನಿಸಲಾಗಿದೆ. ಸದ್ಯ ಯುವತಿ ಸಾವಿನ ಸುತ್ತ ಸಾಕಷ್ಟು ಅನುಮಾನದ ಹುತ್ತಗಳು ಹುಟ್ಟಿಕೊಂಡಿವೆ.

ಇನ್ನೂ ಆಕೆಯ ಸಾವಿಗೆ ಕಾರಣ ಯಾರು ಮತ್ತು ಯಾಕೆ ಎಂಬುದು ತನಿಖೆ ಮೂಲಕ ಹೊರ ಬರಬೇಕಿದೆ. ಜೊತೆಗೆ ಆತ್ಮಹತ್ಯೆ ಮಾಡಿಕೊಂಡವರ ಹೆಸರಿನಲ್ಲಿ ಕುಟುಂಬಸ್ಥರು ಪರಿಹಾರ ಪಡೆದು ಸರ್ಕಾರಕ್ಕೆ ವಂಚನೆ ಕೂಡ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here