ಮಾವು ಬೆಲೆ ಕುಸಿತದ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಲಾಗುತ್ತದೆ: ರಾಮಲಿಂಗಾರೆಡ್ಡಿ!

0
Spread the love

ಬೆಂಗಳೂರು: ಮಾವು ಬೆಲೆ ಕುಸಿತದ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಮಾವು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆ ಬೆಂಬಲ ಬೆಲೆ ಕೊಡುವ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಿ, ನಿರ್ಧಾರ ತೆಗೆದುಕೊಳ್ಳಲಾಗುತ್ತದೆ.

Advertisement

ಮಾವು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಪ್ರಾರಂಭದಲ್ಲಿ ಮಾವು ಮೇಳ ಮಾಡಿದಾಗ ನಾನು ಹೋಗಿದ್ದೆ. ಆಗ ಬೆಲೆ ಜಾಸ್ತಿಯಿತ್ತು. ಈಗ ದಿಢೀರ್ ಅಂತ ಕಡಿಮೆ ಆಗಿದೆ. ಈ ಬಾರಿ ಬೆಳೆ ಜಾಸ್ತಿಯಾಗಿ, ಫಸಲು ಜಾಸ್ತಿ ಬಂದಿದೆ. ಕೋಲಾರದ ಹಣ್ಣು ಆಂಧ್ರಪ್ರದೇಶಕ್ಕೆ ಹೋಗುತ್ತಿತ್ತು. ಈಗ ಆಂಧ್ರಪ್ರದೇಶದ ಸಿಎಂ ಕೋಲಾರದ ಹಣ್ಣಿಗೆ ಬ್ಯಾನ್ ಮಾಡಿದ್ದಾರೆ. ಹೀಗಾಗಿ ಬೆಲೆ ಕುಸಿತವಾಗಿದೆ..

ಬೆಲೆ ಕುಸಿತದ ಬಗ್ಗೆ ಕಳೆದ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಿದ್ದೆವು. ಇವತ್ತು ಮತ್ತೆ ಚರ್ಚೆ ಮಾಡುತ್ತೇವೆ. ರೈತರು ಬೆಂಬಲ ಬೆಲೆ ಕೇಳುತ್ತಿದ್ದಾರೆ. ಇದರ ಬಗ್ಗೆ ಇವತ್ತು ಚರ್ಚೆ ಮಾಡಿ, ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here