ಕಲಬುರಗಿ: ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಹಣ ಕೊಟ್ಟವರಿಗಷ್ಟೇ ಮನೆ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಆಳಂದ ಶಾಸಕ ಹಾಗೂ ಯೋಜನಾ ಆಯೋಗದ ಉಪಾಧ್ಯಕ್ಷ ಬಿ ಆರ್ ಪಾಟೀಲ್ ಆಡಿಯೋದಲ್ಲಿ ಬಹಿರಂಗವಾಗಿದೆ.
Advertisement
ಹೌದು ವಸತಿ ಸಚಿವ ಜಮೀರ್ ಅಹ್ಮದ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಅವರ ಮೊಬೈಲ್ಗೆ ಕರೆ ಮಾಡಿ ಅಸಮಾಧಾನ ವ್ಯಕ್ತಪಡಿಸಿರುವ ಪಾಟೀಲ್ ಅವರು, ಹಣ ಪಡೆದು ಯಾವ ಗ್ರಾಮಕ್ಕೆ ಎಷ್ಟು ಮನೆಗಳನ್ನು ಮಂಜೂರು ಮಾಡಲಾಗಿದೆ? ಎಂಬ ಮಾಹಿತಿ ಪಡೆದುಕೊಂಡಿದ್ದಾರೆ.
ಅಲ್ಲದೇ ಈ ಮಾಹಿತಿಯನ್ನ ನಾನು ಬಹಿರಂಗಪಡಿಸಿದ್ರೆ ಸರ್ಕಾರವೇ ಅಲುಗಾಡುತ್ತೆ ಎಂದೂ ಶಾಸಕರು ಎಚ್ಚರಿಕೆ ನೀಡಿದ್ದಾರೆ. ಸದ್ಯ ಬಿ.ಆರ್ ಪಾಟೀಲ್ ಅವರು ಸರ್ಫರಾಜ್ ಖಾನ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಮೊಬೈಲ್ ಆಡಿಯೋ ವೈರಲ್ ಆಗಿದೆ.