ಕಲಬುರಗಿ: ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಭೀಕರ ಅಗ್ನಿ ಅವಘಡ ಸಂಭವಿಸಿ ಇಡೀ ಮನೆಗೆ ಬೆಂಕಿ ಹೊತ್ತಿಕೊಂಡು, ಮನೆ ಸುಟ್ಟು ಕರಕಲಾಗಿರುವ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಬಂದರವಾಡ ಗ್ರಾಮದ ತೋಟದ ಮನೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ದಂಪತಿಗಳು ಹೊರಗಡೆ ಇದ್ದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಂಡ ಈರಯ್ಯ ತೋಟದ ಕೆಲಸದಲ್ಲಿ ತೊಡಗಿಸಿಕೊಂಡಿದ್ದರೆ ಅವರ ಪತ್ನಿ ಗ್ಯಾಸ್ ಮೇಲೆ ಅನ್ನಕ್ಕೆ ಇಟ್ಟು ಹೊರಗಡೆ ಪಾತ್ರೆ ತೊಳೆಯುತ್ತಿದ್ದಾಗ ಸಿಲಿಂಡರ್ ಬ್ಲಾಸ್ಟ್ ಆಗಿದೆ. ಸಿಲಿಂಡರ್ ಸ್ಪೋಟಗೊಂಡ ನಂತರ ಬೆಂಕಿ ಹೊತ್ತಿಕೊಂಡಿದೆ.
ಮನೆಯಲ್ಲಿದ್ದ12 ಚೀಲ ಜೋಳ, 10 ಚೀಲ ತೊಗರಿ, 25 ಚೀಲ ಗೋದಿ, 19 ಗ್ರಾಮ ಬಂಗಾರದ ಒಡವೆ, 4 ಲಕ್ಷ ರೂ ನಗದು ಬೆಂಕಿಗೆ ಆಹುತಿಯಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ರು ಕೂಡ ಅಷ್ಟರಲ್ಲೇ ಮನೆ ಭಾಗಶಃ ಸುಟ್ಟು ಕರಕಲಾಗಿತ್ತು. ಇನ್ನೂ ಈ ಘಟನೆ ಸಂಬಂಧ ಗಾಣಗಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.