ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ: ತಪ್ಪಿತಸ್ಥರ ವಿರುದ್ಧ ಕ್ರಮ ಎಂದ ಈಶ್ವರ್ ಖಂಡ್ರೆ!

0
Spread the love

ಬೀದರ್:- ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷ ಭ್ರಷ್ಟಾಚಾರ ರಹಿತವಾದ ಪಕ್ಷವಾಗಿದ್ದು, ನಮ್ಮಲ್ಲಿ ಝೀರೋ ಭ್ರಷ್ಟಾಚಾರವಿದೆ ಎಂದಿದ್ದಾರೆ.

Advertisement

ವಸತಿ ಯೋಜನೆಯಲ್ಲಿ ಮಧ್ಯವರ್ತಿಗಳಾಗಲಿ, ದಲ್ಲಾಳಿಗಳಾಗಲಿ ಭ್ರಷ್ಟಾಚಾರ ಮಾಡಿದ ಪುರಾವೆಗಳು ಇದ್ದರೆ ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಸುಳ್ಳು ಹೇಳೋದೇ ಬಿಜೆಪಿಯ ಚಾಳಿಯಾಗಿದ್ದು, ಇದರಿಂದ ಏನು ಆಗಲ್ಲ. ನಮ್ಮ ಜನಪ್ರಿಯತೆಯಿಂದ ಬಿಜೆಪಿ ಕಂಗಾಲಾಗಿದೆ ಎಂದು ತಿರುಗೇಟು ನೀಡಿದ್ದಾರೆ.

ಇದೇ ವೇಳೆ ಯೋಗದ ಬಗ್ಗೆ ಮಾತನಾಡಿದ ಈಶ್ವರ್ ಖಂಡ್ರೆ, ಧಾನ್ಯ, ಪ್ರಾಣಾಯಾಮ, ಯೋಗ ಮಾಡೋದ್ರಿಂದ ಏಕಾಗ್ರತೆ ಬೆಳೆಯುತ್ತದೆ. ಯೋಗ ಒಂದು ದಿನದ ಕಾರ್ಯಕ್ರಮವಾಗಬಾರದು. ಜನರು ಪ್ರತಿನಿತ್ಯ ಯೋಗಾಭ್ಯಾಸ ಮಾಡಬೇಕು. ನಾನು ಪ್ರತಿನಿತ್ಯ ಯೋಗಾಭ್ಯಾಸ ಮಾಡಲು ಪ್ರಯತ್ನ ಮಾಡುತ್ತೇನೆ ಎಂದಿದ್ದಾರೆ.


Spread the love

LEAVE A REPLY

Please enter your comment!
Please enter your name here