ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ: ಐದಾರು ಕಿಲೋಮೀಟರ್ ಟ್ರಾಫಿಕ್ ಜಾಮ್!

0
Spread the love

ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿ ಹೊಡೆದಿರುವ ಘಟನೆ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯ ಹನುಮಂತಪುರ ಗೇಟ್ ಬಳಿ ಜರುಗಿದೆ. ಘಟನೆಯಿಂದ ಐದಾರು ಕಿಲೋಮೀಟರ್ ದೂರ ಟ್ರಾಫಿಕ್ ಜಾಮ್ ಆಗಿದ್ದು, ಸವಾರರು ಪರದಾಟ ನಡೆಸಿದರು.

Advertisement

ಲಾರಿ ಪಲ್ಟಿ ಹೊಡೆದಿರುವುದಕ್ಕೆ ರಸ್ತೆಯ ಅವೈಜ್ಞಾನಿಕ ಕಾಮಗಾರಿ ಕಾರಣ ಎಂಬ ಆರೋಪ ಕೇಳಿ ಬಂದಿದೆ. ನೆನ್ನೆ ಕೂಡ ಇದೇ ಸ್ಥಳದಲ್ಲಿ ಒಂದು ಲಾರಿ ಪಲ್ಟಿಯಾಗಿತ್ತು. ಇಂದು ಅದೇ ಸ್ಥಳದಲ್ಲಿ ಮತ್ತೊಂದು ಲಾರಿ ಪಲ್ಟಿಯಿಂದ ಬಾರಿ ಟ್ರಾಫಿಕ್ ಆಗಿದೆ. ಘಟನೆ ಬೆನ್ನಲ್ಲೇ ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಅಲ್ಲದೇ ಟ್ರಾಫಿಕ್ ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ.

ಇಂದು ಸಿಎಂ ಸಿದ್ದರಾಮಯ್ಯ ತುಮಕೂರು ಜಿಲ್ಲೆಯ ಪ್ರವಾಸ ಹಿನ್ನೆಲೆ ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರು ಹರಸಾಹಸ ಪಡುತ್ತಿರುವ ದೃಶ್ಯ ಕಂಡು ಬಂದಿದೆ.


Spread the love

LEAVE A REPLY

Please enter your comment!
Please enter your name here