ಕಳ್ಳರ ಕೈಚಳಕ: ಮಕ್ಕಳ ಕಾಲೇಜು ಫೀಸ್ ಕಟ್ಟಲು ಎತ್ತಿಟ್ಟಿದ್ದ ಹಣ ಕದ್ದೊಯ್ದ ಖದೀಮರು!

0
Spread the love

ಬೆಂಗಳೂರು:- ಬೆಂಗಳೂರಿನ ಪ್ಯಾಲೇಸ್ ಆವರಣದಲ್ಲಿರುವ ಮನೆಯಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ. ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕೆ, ಕಾಲೇಜು ಫೀಸ್ ಕಟ್ಟಲು ಎತ್ತಿಟ್ಟಿದ್ದ ಹಣವನ್ನು ದೋಚಿ ಕಳ್ಳರು ಎಸ್ಕೇಪ್ ಆಗಿದ್ದಾರೆ.

Advertisement

ಯಾರು ಇಲ್ಲದ ಸಮಯ ನೋಡಿಕೊಂಡು ಬಾಗಿಲು ಮುರಿದು, ಒಳಗಡೆ ಹೋಗಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಶ್ರೀನಿವಾಸ್ ಎಂಬುವವರ ಮನೆಯಲ್ಲಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಮನೆಯಲ್ಲಿದ್ದ 2 ಬೀರು ಒಡೆದು, ಅದರಲ್ಲಿದ್ದ ಚಿನ್ನಾಭರಣ, ನಗದು ಕದ್ದು ಖದೀಮರು ಎಸ್ಕೇಪ್ ಆಗಿದ್ದಾರೆ. ಮಕ್ಕಳ ಕಾಲೇಜು ಫೀಸ್ ಕಟ್ಟೋಕೆ ಸಾಲ ಮಾಡಿ, ಮನೆಯಲ್ಲಿ ಹಣ ತಂದಿಟ್ಟಿದ್ದರು. ಇದೇ ಹಣವನ್ನು ಖದೀಮರು ಕಳ್ಳತನ ಮಾಡಿಕೊಂಡು ಹೋಗಿರುವುದರಿಂದ ಮನೆ ಮಾಲೀಕ ಶ್ರೀನಿವಾಸ್ ದಿಕ್ಕು ತೋಚದೇ ಕಂಗಾಲಾಗಿದ್ದಾರೆ.

ಈ ಸಂಬಂಧ ಶ್ರೀನಿವಾಸ್ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಳ್ಳತನ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here