ಬೆಂಗಳೂರು:- ಚಿನ್ನಾಭರಣ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು, ಐಶ್ವರ್ಯ ಗೌಡಗೆ ಸಂಬಂಧಿಸಿದ ಸ್ಥಿರಾಸ್ತಿ-ಚರಾಸ್ತಿ ಮುಟ್ಟುಗೋಲು ಹಾಕಿದ್ದಾರೆ. ಐಶ್ವರ್ಯಗೌಡ ಅವರಿಗೆ ಸೇರಿದ ಅಂದಾಜು 2.01 ಕೋಟಿ ರೂ. ಸ್ಥಿರಾಸ್ತಿ ಮತ್ತು ಅಂದಾಜು 1.97 ಕೋಟಿ ರೂ. ಮೌಲ್ಯದ ಚರಾಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಐಶ್ವರ್ಯಗೌಡ ಅವರಿಗೆ ಸಂಬಂಧಿಸಿದ ಒಟ್ಟು 3.98 ಕೋಟಿ ರೂ. ಆಸ್ತಿಯನ್ನು ಇಡಿ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಇನ್ನೂ ಐಶ್ವರ್ಯ ಗೌಡ ಅವರ ನಿವಾಸ ಮತ್ತು ಗೊರಗುಂಟೆಪಾಳ್ಯದಲ್ಲಿರುವ ಫ್ಲಾಟ್ ಮೇಲೆ ಇಡಿ ಅಧಿಕಾರಿಗಳು ಏಪ್ರಿಲ್ 24 ರಂದು ದಾಳಿ ಮಾಡಿದ್ದರು. ಐಶ್ವರ್ಯ, ಆಕೆಯ ಪತಿ ಹರೀಶ್ ಮತ್ತು ಇತರರ ವಿರುದ್ಧ ತನಿಖೆ ನಡೆಸಿದ್ದ ಇಡಿ ಆರೋಪಿಗಳು ಹೆಚ್ಚಿನ ಲಾಭ ನೀಡುವುದಾಗಿ ಹಣ ಪಡೆದಿದ್ದರು. ಆದರೆ ಪಡೆದ ಹಣವನ್ನ ವಾಪಸ್ ನೀಡದೆ ವಂಚಿದ್ದರು. ಆರೋಪಿಗಳ ವಿರುದ್ಧ ಹಣ ನೀಡಿದವರಿಗೆ ದೊಡ್ಡ ರಾಜಕಾರಣಿಗಳ ಹೆಸರು ಹೇಳಿ ಬೆದರಿಕೆ ಹಾಕಿದ್ದ ಆರೋಪ ಇತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಇಡಿ ತನಿಖೆ ನಡೆಸುತ್ತಿದೆ. ಪ್ರಕರಣ ಸಂಬಂಧ ಆರೋಪಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇಡಿ ದಾಳಿ ಮಾಡಿತ್ತು. ದಾಳಿ ವೇಳೆ ಅಕ್ರಮ ಹಣ ವರ್ಗಾವಣೆ ಸಂಬಂಧ ದಾಖಲೆಗಳು ಸಿಕ್ಕಿದ್ದವು. ತನಿಖೆ ವೇಳೆ ಅಕ್ರಮ ಹಣ ವರ್ಗಾವಣೆ ಕಂಡುಬಂದ ಹಿನ್ನೆಲೆಯಲ್ಲಿ ಐಶ್ವರ್ಯ ಮತ್ತು ಇತರರಿಗೆ ಸಂಬಂಧಿಸಿದ ಆಸ್ತಿಗಳನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ.