ರೈತ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗದಗ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ನಟರಾಜ ಸವಡಿ ಅವರನ್ನು ರಾಜ್ಯಾಧ್ಯಕ್ಷ ವಾಸುದೇವ ಮೇಟಿ ಅವರ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಗದಗ ಜಿಲ್ಲೆಯ ಐದು ತಾಲೂಕುಗಳ ಅಧ್ಯಕ್ಷರುಗಳು ಅಧ್ಯಕ್ಷರುಗಳನ್ನು ನೇಮಕ ಮಾಡಲಾಯಿತು.

Advertisement

ಗದಗ ತಾಲೂಕಾ ಅಧ್ಯಕ್ಷರಾಗಿ ಮೋಹನ ಇಮರಾಪೂರ, ಶಿರಹಟ್ಟಿ ತಾಲೂಕಾಧ್ಯಕ್ಷರಾಗಿ ಮಾರುದ್ರಯ್ಯ ಲಕ್ಕುಂಡಿ, ಮುಂಡರಗಿ ತಾಲೂಕಾಧ್ಯಕ್ಷರಾಗಿ ಮಲ್ಲಿಕಾರ್ಜುನ ಹಿರೇಮಠ, ರೋಣ ತಾಲೂಕಾಧ್ಯಕ್ಷರಾಗಿ ಸೋಮಶೇಖರ ಕಡಗದ, ಲಕ್ಷ್ಮೇಶ್ವರ ತಾಲೂಕಾಧ್ಯಕ್ಷರಾಗಿ ರುದ್ರಗೌಡ ಪಾಟೀಲ ಅವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ವಾಸುದೇವ ಮೇಟಿ ಮಾತನಾಡಿ, ರೈತ ಸಂಘದ ತತ್ವ-ಸಿದ್ಧಾಂತಗಳಿಗೆ ಅನುಗುಣವಾಗಿ ರೈತರ ಹಿತ ಕಾಪಾಡಬೇಕು. ಜಿಲ್ಲೆಯ ಉಳಿದ ತಾಲೂಕು ಘಟಕದ ಅಧ್ಯಕ್ಷರುಗಳು, ಪದಾಧಿಕಾರಿಗಳನ್ನು ನೇಮಕ ಮಾಡುವಂತೆ ಜಿಲ್ಲಾಧ್ಯಕ್ಷರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಗಣ್ಣ ಬಾಗೇವಾಡಿ, ರಾಜ್ಯ ಉಪಾಧ್ಯಕ್ಷ ವಿ.ಎಸ್. ಕಂಟಪ್ಪಗೌಡ್ರು, ರಾಜ್ಯ ಕಾರ್ಯದರ್ಶಿ ಫಕೀರಪ್ಪ ಪೂಜಾರಿ, ತಾಳಿಕೋಟಿ ತಾಲೂಕಾಧ್ಯಕ್ಷ ವೀರಪ್ಪ ಮಡಿವಾಳ ಮುಂತಾದವರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here