ನಮ್ಮ ಬಳಿ ದುಡ್ಡಿಲ್ಲ. ಸಿದ್ದರಾಮಣ್ಣನ ಬಳಿ ದುಡ್ಡಿಲ್ಲ: ಸಚಿವ ಪರಮೇಶ್ವರ್ ಶಾಕಿಂಗ್ ಹೇಳಿಕೆ

0
Spread the love

ಬಾಗಲಕೋಟೆ: ನಮ್ಮ ಬಳಿ ದುಡ್ಡಿಲ್ಲ. ಸಿದ್ದರಾಮಣ್ಣನ ಬಳಿ ದುಡ್ಡಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆ ಬಾದಾಮಿಯಲ್ಲಿ ಮಾತನಾಡಿದ ಅವರು,

Advertisement

ಬಾದಾಮಿ ಅಭಿವೃದ್ಧಿಗೆ ಒಂದು ಯೋಜನೆ ಸಿದ್ದ ಮಾಡಿ. ಅದು ಎಷ್ಟು ಮೊತ್ತದ್ದಾದರೂ ಪರವಾಗಿಲ್ಲ. ಅದು ಸಾವಿರ ಕೋಟಿ ಪ್ರಾಜೆಕ್ಟ್ ಆಗಿರಲಿ. ಪ್ರಸ್ತಾವನೆ ಸಿದ್ಧ ಮಾಡಿ ಕೇಂದ್ರಕ್ಕೆ ಕಳುಹಿಸಿಕೊಡಿ. ಯಾಕೆಂದರೆ, ನಮ್ಮ ಬಳಿ ದುಡ್ಡಿಲ್ಲ. ಸಿದ್ದರಾಮಣ್ಣನ ಬಳಿ ದುಡ್ಡಿಲ್ಲ ಎಂದು ಹೇಳಿದ್ದಾರೆ.

ಒಂದೆಡೆ ವಸತಿ ಯೋಜನೆಯಲ್ಲಿ ಅಕ್ರಮದ ಬಗ್ಗೆ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಆರೋಪ ಮಾಡಿದ್ದರೆ, ಮತ್ತೊಂದೆಡೆ ಅನುದಾನ ವಿಚಾರವಾಗಿ ಶಾಸಕ ರಾಜು ಕಾಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಅದರ ಬೆನ್ನೆಲ್ಲೇ ಈಗ ಗೃಹ ಸಚಿವ ಡಾ. ಜಿ ಪರಮೇಶ್ವರ ಕೂಡ ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರದ ಬಳಿ ಹಣ ಇಲ್ಲ ಎಂದು ಬಹಿರಂಗವಾಗಿ ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here