ಬೆಂಗಳೂರು: ಕಾಂಗ್ರೆಸ್ ಭ್ರಷ್ಟಾಚಾರ ನೋಡುವುದಕ್ಕೆ ನಾವು ಸ್ಕ್ಯಾನ್ ಮಾಡುವ ಅವಶ್ಯಕತೆ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,
Advertisement
ಅಂಗೈ ಹುಣ್ಣಿಗೆ ಕನ್ನಡಿ ಹಿಡಿಯುವ ಅವಶ್ಯಕತೆ ಇಲ್ಲವೋ ಹಾಗೆ ಕಾಂಗ್ರೆಸ್ ಭ್ರಷ್ಟಾಚಾರ ನೋಡುವುದಕ್ಕೆ ನಾವು ಸ್ಕ್ಯಾನ್ ಮಾಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಲಂಚ ಕೊಟ್ಟರೆ ಮಾತ್ರ ಮೊದಲು ಅನುದಾನ ಸಿಗುತ್ತದೆ. ಇದು ಕೇವಲ ಅಡ್ವಾನ್ಸ್; ಬಿಲ್ಲು ಮಾಡಿಸಿಕೊಳ್ಳಲು ಪ್ರತ್ಯೇಕ, ಎನ್ಓಸಿ ತೆಗೆದುಕೊಳ್ಳುವುದಕ್ಕೆ ಪ್ರತ್ಯೇಕ,
ಕಾಮಗಾರಿ ತೆಗೆದುಕೊಳ್ಳಲು ಲಂಚ ಕೊಡಬೇಕು. ಯಾವ ಇಲಾಖೆಯಲ್ಲೂ ಭ್ರಷ್ಟಾಚಾರ ಬಿಟ್ಟಿಲ್ಲ. ರಕ್ತ ಹೀರುತ್ತಿದ್ದಾರೆ, ಜಿಗಣೆಯಾದರೆ ರಕ್ತವನ್ನು ಹೀರಿ ಬಿಡುತ್ತದೆ. ಆದರೆ ಇವರು ಹೀರುತ್ತಲೇ ಇದ್ದಾರೆ ಎಂದು ಟೀಕಿಸಿದ್ದಾರೆ.