ನಡುರಸ್ತೆಯಲ್ಲೇ ಹೊತ್ತಿಕೊಂಡ ಬೆಂಕಿ: ಕಾರು ಸುಟ್ಟು ಕರಕಲು!

0
Spread the love

ರಾಯಚೂರು: ರಾಯಚೂರಿನ ದೇವದುರ್ಗ ತಾಲೂಕಿನ ಗಬ್ಬೂರಿನಲ್ಲಿ ನಡುರಸ್ತೆಯಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು ಕಾರು ಸುಟ್ಟು ಕರಕಲಾಗಿರುವ ಘಟನೆ ಜರುಗಿದೆ.

Advertisement

ಅದೃಷ್ಟವಶಾತ್ ಘಟನೆಯಿಂದ ಕಾರು ಚಾಲಕ ದಯಾನಂದ್ ಪಾಟೀಲ್ ಎಂಬಾತ ಪವಾಡದ ರೀತಿ ಪಾರಾಗಿದ್ದಾನೆ. ಹಿರೆಬೂದೂರಿನಿಂದ ರಾಯಚೂರಿಗೆ ಡಸ್ಟರ್ ಕಾರಿನಲ್ಲಿ ಹೊರಟಿದ್ದರು. ಈ ವೇಳೆ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿ ಯಾರೂ ಇಲ್ಲದ ಹಿನ್ನೆಲೆ ಭಾರೀ ಅನಾಹುತವೊಂದು ತಪ್ಪಿದೆ. ಮಾರ್ಗಮಧ್ಯೆ ಗಬ್ಬೂರಿನಲ್ಲಿ ಎಳೆನೀರು ಕುಡಿಯಲು ಕಾರಿನಿಂದ ಇಳಿದಿದ್ದರು. ಈ ವೇಳೆ ನೋಡನೋಡುತ್ತಲೇ ಇಂಜಿನ್‌ನಿಂದ ದಟ್ಟ ಹೊಗೆ ಆವರಿಸಿ, ಬಳಿಕ ಬೆಂಕಿ ಹೊತ್ತಿಕೊಂಡಿದೆ.

ಬೆಂಕಿಯಿಂದಾಗಿ ಹೆದ್ದಾರಿಯಲ್ಲಿ ದಟ್ಟ ಹೊಗೆ ಆವರಿಸಿತ್ತು. ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸಿದ್ದಾರೆ. ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here