ಜಾನುವಾರು ರಕ್ಷಣೆ ನೆಪದಲ್ಲಿ ಸುಲಿಗೆ: ಓರ್ವ ಮಹಿಳೆ ಸೇರಿ 7 ಮಂದಿ ಅರೆಸ್ಟ್!

0
Spread the love

ಮೈಸೂರು:- ಜಾನುವಾರು ರಕ್ಷಣೆ ನೆಪದಲ್ಲಿ ಸುಲಿಗೆ ಮಾಡುತ್ತಿದ್ದ ಓರ್ವ ಮಹಿಳೆ ಸೇರಿ 7 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹುಣಸೂರು ಪೊಲೀಸರ ಕಾರ್ಯಾಚರಣೆಯಲ್ಲಿ, ಹಿಂದೂ ರಾಷ್ಟ್ರ ರಕ್ಷಣಾ ಪಡೆಯ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ, ಓರ್ವ ಮಹಿಳೆ ಸೇರಿ 7 ಮಂದಿಯ ಬಂಧನವಾಗಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕಟ್ಟೆಮಳಲವಾಡಿಯಲ್ಲಿ ಘಟನೆ ಜರುಗಿದೆ. ಹಿಂದೂ ಸಂಘಟನೆ ಹೆಸರಿನಲ್ಲಿ ಜಾನುವಾರು ಸಂರಕ್ಷಣೆ ಮಾಡುವ ನೆಪದಲ್ಲಿ ಈ ಗ್ಯಾಂಗ್ ಜಾನುವಾರು ಸಾಗಿಸುವ ವಾಹನಗಳ ತಡೆದು ಹಣ ವಸೂಲಿ ಮಾಡುತ್ತಿತ್ತು ಎಂಬ ಆರೋಪವಿದೆ.

Advertisement

ತಾಲೂಕಿನ ರತ್ನಪುರಿಯ ಕಿರಣ್ ಬುಧವಾರ ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆ ಸಂತೆಯಲ್ಲಿ ಮೂರು ಜಾನುವಾರುಗಳನ್ನು ಖರೀದಿಸಿ ವಾಹನದಲ್ಲಿ ಸಾಗಿಸುತ್ತಿದ್ದ. ಈ ವೇಳೆ ಕಾರಿನಲ್ಲಿ ಹಿಂಬಾಲಿಸಿಕೊಂಡು ತಾಲೂಕಿನ ಕಟ್ಟೆಮಳಲವಾಡಿ ಬಳಿ ಅಡ್ಡಗಟ್ಟಿ ಕಸಾಯಿಖಾನೆಗೆ ಜಾನುವಾರು ಸಾಗಿಸುತ್ತಿದ್ದೀರಾ ಎಂದು ಚಾಲಕ ಕಿರಣ್‌ಗೆ ಬೆದರಿಸಿ 25 ಸಾವಿರ ರೂ. ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು.

ನಾನು ವ್ಯವಸಾಯಕ್ಕಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದೇನೆಂದು ಹೇಳಿದನಾದರೂ ಕೇಳದೆ ಕೊನೆಗೆ 20 ಸಾವಿರ ಕೊಟ್ಟರೆ ಬಿಡುತ್ತೇವೆ ಎಂದು ಧಮ್ಕಿ ಹಾಕಿದ್ದಾರೆ. ಈ ವೇಳೆ ಏನು ನಡೆಯುತ್ತಿದೆ ಎಂದು ರಸ್ತೆಯಲ್ಲಿ ಹೋಗುತ್ತಿದ್ದ ಜನರು ಗಮನಿಸಿ ಆರೋಪಿಗಳ ವಿರುದ್ಧ ತಿರುಗಿ ಬಿದ್ದು, ತರಾಟೆಗೆ ತೆಗೆದುಕೊಂಡು ಗೂಸಾ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ, ಇವರ ಆಟಾಟೋಪ ಬಯಲಾಗಿದೆ.


Spread the love

LEAVE A REPLY

Please enter your comment!
Please enter your name here