ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಟ್ಯಾಂಕರ್ ಪಲ್ಟಿ: ಸಾವಿರಾರು ಲೀಟರ್ ಹಾಲು ಮಣ್ಣುಪಾಲು!

0
Spread the love

ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಒಂದು ಪಲ್ಟಿ ಹೊಡೆದ ಪರಿಣಾಮ ಸಾವಿರಾರು ಲೀಟರ್ ಹಾಲು ಮಣ್ಣುಪಾಲಾಗಿರುವ ಘಟನೆ ಜರುಗಿದೆ.

Advertisement

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ‌ ಬುಕ್ಕಸಾಗರ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಸಾವಿರಾರು ಲೀ.ಹಾಲಿನ ಟ್ಯಾಂಕರ್​ ಪಲ್ಟಿಯಾದ ಘಟನೆ ಜರುಗಿದೆ. ರಸ್ತೆ ಬದಿ ನಿಂತಿದ್ದ ಪಿಕಪ್​​ ವಾಹನದ ಮೇಲೆ ಹಾಲಿನ ಟ್ಯಾಂಕರ್​ ಬಿದ್ದಿದೆ. ಚಾಲಕನಿಗೆ ಗಂಭೀರ ಗಾಯಗಳಾಗಿವೆ.

ಘಟನೆಯಿಂದ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟ್ಯಾಂಕರ್ ಪಲ್ಟಿಯಾಗಿದ್ದರಿಂದ ಸಾವಿರಾರು ಲೀಟರ್ ಹಾಲು ಮಣ್ಣುಪಾಲಾಯಿತು. ರಸ್ತೆಯಲ್ಲಿ ನೀರಿನಂತೆ ಹಾಲು ಹರಿದಿದೆ.


Spread the love

LEAVE A REPLY

Please enter your comment!
Please enter your name here