ಬೆಂಗಳೂರು: ಆಡಳಿತದಲ್ಲಿ ಕಂಟ್ರೋಲ್ ಕಳೆದುಕೊಂಡಿಲ್ಲ. ಮಾಧ್ಯಮದವರೇ ಬ್ಲೋ ಅಪ್ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಸಿಎಂ ಆಡಳಿತದಲ್ಲಿ ನಿಯಂತ್ರಣ ಕಳೆದುಕೊಳ್ಳುತ್ತಿದ್ದಾರೆ ಎಂಬ ಆರೋಪ ವಿಚಾರವಾಗಿ ಮಾತನಾಡಿದ ಅವರು,
ನಾನು ಎಲ್ಲರ ಜೊತೆ ಮಾತನಾಡುತ್ತೇನೆ. ಏನೂ ಸಮಸ್ಯೆ ಇಲ್ಲ. ಆಡಳಿತದಲ್ಲಿ ಕಂಟ್ರೋಲ್ ಕಳೆದುಕೊಂಡಿಲ್ಲ. ಮಾಧ್ಯಮದವರೇ ಬ್ಲೋ ಅಪ್ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಇನ್ನು ಬಿ.ಆರ್.ಪಾಟೀಲ್ ಭೇಟಿ ವಿಚಾರವಾಗಿ ಮಾತನಾಡಿದ ಅವರು, ಪಕ್ಷದ ಅಧ್ಯಕ್ಷನಾಗಿ ವಾಸ್ತವಾಂಶ ಕೇಳಬೇಕಿತ್ತು. ಅವರಿಗೆ ಫೋನ್ ಮಾಡಿ ಕರೆಸಿದ್ದೆ. ಹಾಗಾಗಿ ಅವರು ಬಂದಿದ್ದರು.
ಅವರ ವಿಚಾರ ಏನಿದೆ ಎಂಬುದನ್ನು ಹೇಳಿದ್ದಾರೆ. ನಾನು, ಸಿಎಂ, ಸಚಿವ ಜಮೀರ್ ಜೊತೆ ಮಾತನಾಡುತ್ತೇನೆ. ವಾಸ್ತವಾಂಶ ಪರಿಶೀಲನೆ ಮಾಡುತ್ತೇನೆ. ಈ ಮಧ್ಯೆ ನಮ್ಮ ಪಕ್ಷದ ವರಿಷ್ಠರು ಬರುತ್ತಿದ್ದಾರೆ. ಎಲ್ಲರ ಜೊತೆ ಮಾತನಾಡುತ್ತಾರೆ. ವಾಸ್ತವಾಂಶದ ಬಗ್ಗೆ ಮಾತನಾಡುತ್ತಾರೆ ಎಂದರು.