ಇಂದು ದಾವಣಗೆರೆ ಬಂದ್: ಕಾಲುವೆ ಸೀಳಿ ಕುಡಿಯುವ ನೀರಿನ ಅವೈಜ್ಞಾನಿಕ ಕಾಮಗಾರಿ ಖಂಡಿಸಿ ಪ್ರತಿಭಟನೆ!

0
Spread the love

ದಾವಣಗೆರೆ:- ಭದ್ರಾ ಬಲದಂಡೆ ಕಾಲುವೆ ಸೀಳಿ ಕುಡಿಯುವ ನೀರಿನ ಅವೈಜ್ಞಾನಿಕ ಕಾಮಗಾರಿ ಖಂಡಿಸಿ ಇಂದು ದಾವಣಗೆರೆ ಬಂದ್ ಗೆ ಕರೆ ಕೊಡಲಾಗಿದೆ. ಭಾರತೀಯ ರೈತ ಒಕ್ಕೂಟ ಹಾಗೂ ಬಿಜೆಪಿ ರೈತ ಮೋರ್ಚಾ ವತಿಯಿಂದ ಬಂದ್ ಗೆ ಕರೆ ಕೊಡಲಾಗಿದೆ.

Advertisement

ಮಾಜಿ ಸಚಿವ ಎಂಪಿ ರೇಣುಕಾಚಾರ್ಯ, ಎಸ್ ರವೀಂದ್ರನಾಥ್, ಮಾಡಾಳ್ ಮಲ್ಲಿಕಾರ್ಜುನ್ ಹಾಗೂ ಭಾರತೀಯ ರೈತ ಒಕ್ಕೂಟದಿಂದ ಜಯದೇವ ಸರ್ಕಲ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ಬಂದ್ ಹಿನ್ನೆಲೆ ದಾವಣಗೆರೆ ನಗರದ ಪ್ರಮುಖ ಸರ್ಕಲ್‌ಗಳಲ್ಲಿ ಪೊಲೀಸರು ಬಿಗಿ ಭದ್ರತೆ ವಹಿಸಿದ್ದಾರೆ.

ಪ್ರತಿಭಟನೆ ಏಕೆ?

ಭದ್ರಾ ಬಲದಂಡೆ ನಾಲೆಯಿಂದ ಅವೈಜ್ಞಾನಿಕವಾಗಿ ಕುಡಿಯುವ ನೀರಿನ ಯೋಜನೆ ಮಾಡಲಾಗುತ್ತಿದೆ. ಹೊಸದುರ್ಗ ಅಜ್ಜಂಪುರ ತರೀಕೆರೆ ತಾಲೂಕುಗಳ 1600ಕ್ಕೂ ಹೆಚ್ಚು ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆಯನ್ನು ಭದ್ರಾ ಬಲನಾಲೆ ಸೀಳಿ ಕಾಮಗಾರಿ ನಡೆಸಲಾಗುತ್ತಿದೆ. ಇದರಿಂದ ದಾವಣಗೆರೆ ಭಾಗದ ರೈತರಿಗೆ ನೀರು ಪೂರೈಕೆಯಾಗುವುದಿಲ್ಲ. ಇದು ಅವೈಜ್ಞಾನಿಕ, ಕೂಡಲೇ ಕಾಮಗಾರಿಯನ್ನು ಸ್ಥಗಿತ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.


Spread the love

LEAVE A REPLY

Please enter your comment!
Please enter your name here