ಬೆಂಗಳೂರು: ಐದು ಹುಲಿಗಳ ಅನುಮಾನಸ್ಪದ ಸಾವು ಪ್ರಕರಣ ತನಿಖೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಅಮಾನವೀಯ ಘಟನೆ ನಡೆದಿದೆ. ಬ್ಲಾಕ್ ಮ್ಯಾಜಿಕ್ ಮಾಡಿ ಶ್ವಾನ ಹತ್ಯೆ ಮಾಡಲಾಗಿದ್ದು, ನಾಲ್ಕು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ನಾಯಿಯನ್ನು ಹತ್ಯೆ ಮಾಡಿದ ಹಿನ್ನೆಲೆ ಇಡೀ ಅಪಾರ್ಟ್ಮೆಂಟ್ ನ ತುಂಬೆಲ್ಲಾ ದುರ್ನಾತ ಬೀರಿದೆ. ಎಸ್, ಮಹಾದೇವ ಪುರದ ಚಿನ್ನಪ್ಪ ಲೇಔಟ್ ನ ಅಕ್ಮೆ ಬೆಲ್ಲಾಟ್ ಅಪಾರ್ಟ್ಮೆಂಟ್ ನಲ್ಲಿ ಘಟನೆ ಜರುಗಿದೆ. ವೆಸ್ಟ್ ಬೆಂಗಾಲ್ ಮೂಲದ ತ್ರಿಪಾರ್ಣ ಪಾಯ್ಕ ಮಹಿಳೆಯಿಂದ ಕೃತ್ಯ ನಡೆದಿದೆ.
ಈ ಮಹಿಳೆ 4 ಲ್ಯಾಬ್ರೋಡರ್ ನಾಯಿಗಳನ್ನ ಸಾಕಿದ್ದರಂತೆ. ಒಂದು ನಾಯಿಯನ್ನು ಕೊಂದಿದ್ದಾರೆ ಎನ್ನಲಾಗ್ತಿದೆ. ಇನ್ನೂ ನಾಯಿ ಕಳೆಬರದ ವಾಸನೆ ಬರ್ತಿದ್ದ ಹಿನ್ನೆಲೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ರು.
ಸ್ಥಳೀಯರ ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ನಾಯಿಯ ಕಳೆ ಬರಹ ಸಿಕ್ಕಿದೆ. ಇದನ್ನ ಮರಣೋತ್ತರ ಪರೀಕ್ಷೆಗೆಂದು ಕಳಿಸಿದ್ದಾರೆ. ನಾಲ್ಕು ದಿನಗಳ ಹಿಂದೆಯೇ ಹತ್ಯೆ ಮಾಡಿದ್ದು, ಬ್ಲ್ಯಾಕ್ ಮ್ಯಾಜಿಕ್ಗಾಗಿ ಈ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಈ ಸಂಬಂಧ ಮಹದೇವಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.