ಲಕ್ನೋ:- ಉತ್ತರ ಪ್ರದೇಶದ ಬಹ್ರೈಚ್ನಲ್ಲಿ ರೀಲ್ಸ್ ಮಾಡಲು ಐಫೋನ್ಗಾಗಿ ಬೆಂಗಳೂರು ಯುವಕನ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಜರುಗಿದೆ. ಬೆಂಗಳೂರು ಮೂಲದ ಶಾದಾಬ್ ಮೃತ ಯುವಕ. ಮಾವನ ಮದುವೆಗಾಗಿ ಉತ್ತರ ಪ್ರದೇಶಕ್ಕೆ ತೆರಳಿದ್ದಾಗ ಈ ಅವಘಡ ಸಂಭವಿಸಿದೆ. ಉತ್ತರ ಪ್ರದೇಶದ ಇಬ್ಬರು ಅಪ್ರಾಪ್ತರಿಗೆ ರೀಲ್ಸ್ ಮಾಡೋದಕ್ಕೆ ಐಫೋನ್ ಬೇಕಿತ್ತು. ಇದೇ ವೇಳೆ ಮೃತ ಯುವಕ ತಮ್ಮ ಮಾವನ ಮದುವೆಗಾಗಿ ಉತ್ತರ ಪ್ರದೇಶಕ್ಕೆ ತೆರಳಿದ್ದ. ಯುವಕನ ಬಳಿ ಐಫೋನ್ ಇರೋದನ್ನ ಕಂಡ ಅಪ್ರಾಪ್ತರು ಕೊಲೆಗೆ ಸಂಚು ರೂಪಿಸಿದ್ರು.
ಮಾವನ ಮದುವೆಗಾಗಿ ಬೆಂಗಳೂರು ಮೂಲದ ಶಾದಾಬ್ ಬಹ್ರೈಚ್ಗೆ ಬಂದಿದ್ದ. ಆತನ ಬಳಿ ಐಫೋನ್ ಇರೋದನ್ನ ಕಂಡ ಅಪ್ರಾಪ್ತರು. ಮಾರನೇ ದಿನ ಮೃತ ಶಾಬಾದ್ನನ್ನ ವಿಡಿಯೋ ಶೂಟ್ ಮಾಡ್ಬೇಕು ಅಂತ ಹೇಳಿ, ಗ್ರಾಮದ ಹೊರಗಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದರು. ಅಲ್ಲೇ ಅವನ ಮೇಲೆ ದಾಳಿ ನಡೆಸಿದ್ದಾರೆ. ಕತ್ತು ಸೀಳಿ, ಬಳಿಕ ಇಟ್ಟಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾರೆ. ನಂತರ ಅಪ್ರಾಪ್ತರ ಸಂಬಂಧಿಕರು ಚಾಕು ಮುಚ್ಚಿಡಲು ಸಹಾಯ ಮಾಡಿ, ನಾಲ್ವರು ಪರಾರಿಯಾಗಿದ್ದಾರೆ. ಜೂ.20ರಂದು ಕೊಳವೆ ಬಾವಿಯ ಬಳಿ ಆತನ ಶವ ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಸದ್ಯ ಇಬ್ಬರು ಅಪ್ರಾಪ್ತರು ಹಾಗೂ ಅವರ ಸಂಬಂಧಿಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ, ಇಬ್ಬರು ಅಪ್ರಾಪ್ತರು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ.