ವಿಜಯಸಾಕ್ಷಿ ಸುದ್ದಿ, ಮುಳಗುಂದ: ಪಟ್ಟಣದಲ್ಲಿ ಎಲ್ಲಾ ಹಬ್ಬ-ಹರಿದಿನಗಳನ್ನು ಶಾಂತಿ-ಸೌಹಾರ್ದತೆಯಿಂದ ಆಚರಣೆ ಮಾಡಲಾಗುತ್ತಿದ್ದು, ಮೊಹರಂ ಹಬ್ಬವನ್ನು ಎಲ್ಲರೂ ಶಾಂತಿ-ಸೌಹಾರ್ದತೆಯಿಂದ ಆಚರಣೆ ಮಾಡಬೇಕು ಎಂದು ಮುಳಗುಂದ ಪೊಲೀಸ್ ಠಾಣೆ ಸಿಪಿಐ ಸಂಗಮೇಶ ಶಿವಯೋಗಿ ಹೇಳಿದರು.
ಅವರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮುಳಗುಂದ ವ್ಯಾಪ್ತಿಯ ಗ್ರಾಮಗಳ ಮುಖಂಡರ ಶಾಂತಿ ಸಭೆಯನ್ನುದ್ದೇಶಿಸಿ ಮಾತನಾಡಿ, ಮೊಹರಂ ಹಬ್ಬವನ್ನು ಹಿಂದೂ-ಮುಸ್ಲಿಂ ಬಾಂಧವರು ಶಾಂತಿ ಸೌಹಾರ್ದತೆಯಿಂದ ಆಚರಣೆ ಮಾಡುತ್ತಾ ಬಂದಿದ್ದಾರೆ. ಆ ನಿಟ್ಟಿನಲ್ಲಿ ಎಲ್ಲರೂ ಶಾಂತಿ-ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸಬೇಕು ಎಂದರು.
ಈ ಸಂದರ್ಭದಲ್ಲಿ ಅಶೋಕ ಹುಣಶಿಮರದ, ಎ.ಡಿ. ಮುಜಾವಾರ, ಮುನ್ನಾ ಡಾಲಾಯತ, ಬಾಪುಸಾಬ ಕಿಲ್ಲೇದಾರ, ದೇವರಾಜ ಸಂಗನಪೇಟಿ, ರಮೇಶ ಮ್ಯಾಗೇರಿ, ಪೊಲೀಸ್ ಸಿಬ್ಬಂದಿಗಳಾದ ಬಸವರಾಜ ಕುರ್ತಕೋಟಿ, ಎಚ್.ಬಿ. ಗುಡ್ಡಣ್ಣವರ, ವಿ.ವೈ. ಪೂಜಾರ, ನಾಗರಾಜ ಸೌಳಭಾವಿ, ಸಂತೋಷ ಹಿರೇಮಠ ಹಾಗೂ ಮುಳಗುಂದ ವ್ಯಾಪ್ತಿಯ ಮುಖಂಡರು ಇದ್ದರು.