ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಬಾಲ ವಿನಾಯಕ ವಿದ್ಯಾನಿಕೇತನ ಶಾಲೆಯಲ್ಲಿ ಸಿ.ಬಿ.ಎಸ್.ಇಯ ಸೆಂಟರ್ ಆಫ್ ಎಕ್ಸಲೆನ್ಸ್ ಬೆಂಗಳೂರು ವತಿಯಿಂದ ಹುಬ್ಬಳ್ಳಿ-ಧಾರವಾಡ ನಾರ್ಥ್ ಕರ್ನಾಟಕ ಸಹೋದಯ ಅಡಿ ಬರುವ ಶಾಲಾ ಶಿಕ್ಷಕರಿಗೆ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮವನ್ನು ಉತ್ತೇಜಿಸುವ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಕಾರ್ಯಾಗಾರದಲ್ಲಿ ಹುಬ್ಬಳ್ಳಿ, ಧಾರವಾಡ, ನರೇಗಲ್, ರೋಣ, ಮುಂಡರಗಿ ಮುಂತಾದೆಡೆಯಿಂದ ಆಗಮಿಸಿದ 60 ಶಿಕ್ಷಕರು ಪಾಲ್ಗೊಂಡಿದ್ದರು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾದ ಮನೋಜ ಭಟ್ಟ, ರಕ್ಷಾ ಕಾಮತ್, ಬಾಲ ವಿನಾಯಕ ವಿದ್ಯಾನಿಕೇತನ ಶಾಲೆಯ ನಿರ್ದೇಶಕ ವಿನಾಯಕ್ ಆರ್, ಆಡಳಿತ ಮಂಡಳಿ ಸದಸ್ಯರಾದ ಗಾಯಿತ್ರಿ ವಿ, ಪ್ರಾಚಾರ್ಯ ವಿ.ಎಂ. ಅಡ್ನೂರ ಕಾರ್ಯಾಗಾರಕ್ಕೆ ಚಾಲನೆ ನೀಡಿದರು.
ಶಾಲೆಯ ಪಂ. ಪುಟ್ಟರಾಜ ಗವಾಯಿ ಸಂಗೀತ ತಂಡದ ಪ್ರಗತಿ ಮಾಳಶೆಟ್ಟಿ ಹಾಗೂ ಸಂಗಡಿಗರು ಪ್ರಾರ್ಥನಾ ಗೀತೆ ಹಾಡಿದರು. ಶಿಕ್ಷಕಿ ನಯನಾ ರಾಯ್ಕರ್ ಸ್ವಾಗತಿಸಿ ನಿರೂಪಿಸಿದರು. ಹಿರಿಯ ಶಿಕ್ಷಕಿ ಶುಭಾಂಗಿನಿ ದಡ್ಡಿ ಅತಿಥಿಗಳನ್ನು ಪರಿಚಯಿಸಿದರು. ಶಿಕ್ಷಕಿ ಸಿಂಧೂ ಸಾಂಬ್ರಾಣಿ ವಂದಿಸಿದರು.