ಶಿವಮೊಗ್ಗ:- ಹಸುವಿನ ಕೆಚ್ಚಲು ಕೊಯ್ದು ಕಿಡಿಗೇಡಿಗಳು ವಿಕೃತಿ ಮೆರೆದಿರುವಂತಹ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ವಿಜಾಪುರದಲ್ಲಿ ನಡೆದಿದೆ.
Advertisement
ಕಿಡಿಗೇಡಿಗಳು ಗ್ರಾಮದ ವಿಜಯಕುಮಾರ್ ಎಂಬುವರಿಗೆ ಸೇರಿದ ಹಸುವಿನ ಕೆಚ್ಚಲು ಕೊಯ್ದಿದ್ದಾರೆ. ಶನಿವಾರ ಹಸು ಮೇಯಲು ಹೋಗಿದ್ದಾಗ ಕೃತ್ಯವೆಸಗಿ ವಿಕೃತಿ ಮೆರೆದಿದ್ದಾರೆ. ಸ್ಥಳೀಯರ ಸಹಾಯದಿಂದ ಹಸುವನ್ನು ಮನೆಗೆ ಕರೆತಂದ ವಿಜಯಕುಮಾರ್, ಚಿಕಿತ್ಸೆ ನೀಡಿದ್ದಾರೆ.
ಈ ಕುರಿತಾಗಿ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.