ಬೆಂಗಳೂರು: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಶನಿವಾರ ರಾತ್ರಿ ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆಯ ಘಟನೆ ನಡೆದಿದೆ.ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೇ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾರೂ ಕಾನೂನು ಕೈಗೆ ತೆಗೆದುಕೊಳ್ಳಬಾರದು. ಕಾನೂನು ಬಾಹಿರ ಚಟುವಟಿಕೆ ಕಂಡು ಬಂದರೆ ಪೊಲೀಸರಿಗೆ ತಿಳಿಸಲಿ. ಪೊಲೀಸರ ಕೆಲಸವೇ ಕಾನೂನು ಕಾಪಾಡೋದು. ನೀವ್ಯಾಕೆ ಆ ಕೆಲಸ ಮಾಡ್ತೀರಿ?. ನೈತಿಕ ಪೊಲೀಸ್ ಗಿರಿ ಮಾಡಬಾರದು ಎಂದು ತಿಳಿಸಿದ್ದೇವೆ. ಮರಕ್ಕೆ ಕಟ್ಟಿ ಹಾಕಿ ಹೊಡೆದಿದ್ದು ಯಾರು?. ಏಕೆ ಅಂತ ಮಾಹಿತಿ ಪಡೆದು ಕ್ರಮ ತಗೋತೇವಿ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರದಲ್ಲಿ ಹಸು ಕೆಚ್ಚಲು ಕುಯ್ಯುವ ಪ್ರಕರಣಗಳು ಮುಂದುವರಿಕೆ ವಿಚಾರವಾಗಿ ಮಾತನಾಡಿ, ನಮ್ಮ ಸರ್ಕಾರ ಅವರ ಸರ್ಕಾರ ಅನ್ನೋ ಪ್ರಶ್ನೆ ಅಲ್ಲ. ಸಮಾಜದಲ್ಲಿ ಇಂಥ ಘಟನೆಗಳು ನಡೆದಾಗ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ. ಯಾರು ಕೃತ್ಯ ಎಸಗಿದ್ದಾರೋ ಅವರ ಮೇಲೆ ಸೂಮೋಟೋ ಕೇಸ್ ದಾಖಲಿಸಿ ಕ್ರಮ ತಗೋತಾರೆ ಎಂದು ತಿಳಿಸಿದರು.