ಅಚ್ಚರಿಯ ಘಟನೆ: ಆಸ್ವತ್ರೆಗೆ ನಡೆದುಕೊಂಡು ಬಂದ ವ್ಯಕ್ತಿಗೆ ಕೆಲವೇ ಕ್ಷಣಗಳಲ್ಲಿ ಮೆದುಳು ನಿಷ್ಕ್ರಿಯ – ಆಗಿದ್ದೇನು?

0
Spread the love

ದೇವನಹಳ್ಳಿ:- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಸಿಲಿಕಾನ್ ಸಿಟಿ ಆಸ್ವತ್ರೆಯಲ್ಲಿ ಅಚ್ಚರಿಯ ಘಟನೆಯೊಂದು ಜರುಗಿದೆ. ಆಸ್ವತ್ರೆಗೆ ನಡೆದುಕೊಂಡು ಬಂದ ವ್ಯಕ್ತಿಯ ಮೆದುಳು ಕೆಲವೇ ನಿಮಿಷಗಳಲ್ಲಿ ನಿಷ್ಕ್ರಿಯವಾಗಿದೆ.

Advertisement

ಕೋನಪ್ಪ (52) ಬ್ರೈನ್ ಡೆಡ್ ಆದ ವ್ಯಕ್ತಿ. ಈತ ಹೊಸಕೋಟೆಯ ನಿವಾಸಿ ಎನ್ನಲಾಗಿದೆ. ಇತ್ತ ಬ್ರೈನ್ ಡೆಡ್​​ ವಿಷಯ ತಿಳಿದ ಕುಟುಂಬಸ್ಥರು ಕಂಗಾಲಾಗಿದ್ದಾರೆ.

ಆಗಿದ್ದೇನು?

ಕೋನಪ್ಪ ಅವರು, ಬೆಳಗ್ಗೆಯಿಂದ ಕೂಡ ಲವಲವಿಕೆಯಿಂದಲ್ಲೇ ಇದ್ದರು. ಏಕಾಏಕಿ ಎದೆ ನೋವು ಅಂತ ನಡೆದುಕೊಂಡು ಸಿಲಿಕಾನ್ ಸಿಟಿ ಆಸ್ವತ್ರೆಗೆ ಬಂದಿದ್ದಾರೆ. ಈ‌ ವೇಳೆ ವೈದ್ಯರು ಚಿಕಿತ್ಸೆ ನೀಡಲು ಮುಂದಾಗುತ್ತಿದ್ದಂತೆ ಕಾರ್ಡಿಯಾಕ್ ಅರೆಸ್ಟ್​​ನಿಂದ ಕುಸಿದು ಬಿದಿದ್ದಾರೆ. ತಕ್ಷಣ ಮತ್ತೊಂದು ಆಸ್ವತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲು ಮುಂದಾಗುತ್ತಿದ್ದಂತೆ ಕೆಲವೇ ನಿಮಿಷಗಳಲ್ಲಿ ಮೆದುಳು ನಿಷ್ಕ್ರಿಯಗೊಂಡಿದೆ.

ಇನ್ನು ಈ ಬಗ್ಗೆ ವೈದ್ಯರು ಹೇಳಿದೆನೆಂದರೆ ಇತ್ತೀಚೆಗೆ ಕಾರ್ಡಿಯಾಕ್ ಅರೆಸ್ಟ್​ನಿಂದ ಇಂತಹ ಘಟನೆಗಳು ಹೆಚ್ಚಾಗುತ್ತಿವೆ ಎನ್ನುತಾರೆ. ಕೋನಪ್ಪ ಆಸ್ವತ್ರೆಗೆ ನಡೆದುಕೊಂಡು ಬರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಕೆಲವೇ ನಿಮಿಷಗಳಲ್ಲಿ ಆದ ಬ್ರೈನ್ ಡೆಡ್​​ನಿಂದ ಸದ್ಯ ಕೋನಪ್ಪ ಕುಟುಂಬಸ್ಥರು ಕಂಗಾಲಾಗಿದ್ದಾರೆ.


Spread the love

LEAVE A REPLY

Please enter your comment!
Please enter your name here