ವಾಲ್ಮೀಕಿ ಹಗರಣದಲ್ಲಿ ಮುಖ್ಯಮಂತ್ರಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ: ಯತ್ನಾಳ್ ಆರೋಪ

0
Spread the love

ವಿಜಯಪುರ: ವಾಲ್ಮೀಕಿ ಹಗರಣದಲ್ಲಿ ಮುಖ್ಯಮಂತ್ರಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ವಿಜಯಪುರಲ್ಲಿ ಮಾತಾಡಿದ ಅವರು, ಯಡಿಯೂರಪ್ಪ ಹಾಗೂ ವಿಜಯೇಂದ್ರ ನಮ್ಮ ಹೋರಾಟವನ್ನು ತಡೆಯಲು ಪ್ರಯತ್ನಿಸಿದ್ರೂ,

Advertisement

ನಾವು ಕೋರ್ಟ್ ಮುಖಾಂತರ ಹೋರಾಟ ಮುಂದುವರೆಸಿದ್ದೇವೆ. ವಾಲ್ಮೀಕಿ ಹಗರಣದಲ್ಲಿ ಮುಖ್ಯಮಂತ್ರಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. ನಾವು ಕಾನೂನು ಹೋರಾಟ ಮಾಡಿದ್ದಕ್ಕೆ ಈಗ ಜಯ ಸಿಕ್ಕಿದೆ ಎಂದ್ರು.

ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆನಾನು, ಜಾರಕಿಹೊಳಿ, ಅರವಿಂದ ಲಿಂಬಾವಳಿ, ಕುಮಾರ್ ಬಂಗಾರಪ್ಪ ಕಾನೂನು ಹೋರಾಟ ಮಾಡಿದ್ದೇವೆ. ನಮ್ಮ ಹೋರಾಟದ ಫಲವಾಗಿ ಇಂದು ಕೋರ್ಟ್ ಸಿಬಿಐ ತನಿಖೆಗೆ ಆದೇಶ ನೀಡಿದೆ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here