ಬೆಂಗಳೂರು:- ಸಿದ್ದರಾಮಯ್ಯನವರಿಗೆ ತಮ್ಮ ಸ್ಥಾನದ ಬಗ್ಗೆ, ಅಳುಕಿದೆ, ಭಯವಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ ಕೊಟ್ಟಿದ್ದಾರೆ.
Advertisement
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರೆಲ್ಲ ಅವಕಾಶ ಕೊಟ್ಟರೆ ನಾನೇ ಮುಖ್ಯಮಂತ್ರಿಯಾಗ್ತೀನಿ ಅನ್ನುತ್ತಾರೆ, ಜಿ ಪರಮೇಶ್ವರ್, ಸತೀಶ್ ಜಾರಕಿಹೊಳಿ ಮತ್ತು ಡಿಕೆ ಶಿವಕುಮಾರ್ ಸಿಎಂ ಹುದ್ದೆಗಾಗಿ ಜೋರಾಗಿ ಲಾಬಿ ನಡೆಸಿದ್ದಾರೆ.
ಏತನ್ಮಧ್ಯೆ ಸಿದ್ದರಾಮಯ್ಯ 5-ವರ್ಷ ಅವಧಿಗೆ ನಾನೇ ಸಿಎಂ ಅನ್ನುತ್ತಾರೆ. ಹೀಗಾಗಿ ಕಾಂಗ್ರೆಸ್ ಮನೆಯೊಂದರ ಬಾಗಿಲು ನೂರೊಂದು ರೀತಿ ಅಗಿದೆ, ಸಿದ್ದರಾಮಯ್ಯನವರಿಗೆ ತಮ್ಮ ಸ್ಥಾನದ ಬಗ್ಗೆ, ಅಳುಕಿದೆ, ಭಯವಿದೆ, ಹಾಗಾಗೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಬೇಕಿರುವುದನ್ನು ತಾವೇ ಹೇಳುತ್ತಾರೆ ಎಂದು ಅಶೋಕ ವ್ಯಂಗ್ಯವಾಡಿದ್ದರು.