HomeGadag Newsಪಂಚ ಗ್ಯಾರಂಟಿಯಿಂದ ಸಮ ಸಮಾಜ

ಪಂಚ ಗ್ಯಾರಂಟಿಯಿಂದ ಸಮ ಸಮಾಜ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಸಮ ಸಮಾಜ ನಿರ್ಮಾಣ ಮಾಡುವಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪಾತ್ರ ಮಹತ್ತರವಾಗಿದೆ. ಬಡ ಮತ್ತು ಮಧ್ಯಮ ವರ್ಗದವರ ಜೀವನದಲ್ಲಿ ಸಂತೋಷ ತಂದಿದೆ ಎಂದು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಹೇಳಿದರು.

ನಗರದ ಹೊಸ ಬಸ್ ನಿಲ್ದಾಣದಲ್ಲಿ ಜುಲೈ 2ರಿಂದ 4ರವರೆಗೆ ಆಯೋಜಿಸಿರುವ ಕರ್ನಾಟಕ ಸರ್ಕಾರದ 2 ವರ್ಷಗಳ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಸರಕಾರದ ಸಾಧನೆಗಳನ್ನು ಬಿಂಬಿಸುವ ಹಾಗೂ ಜನಪರ ಯೋಜನೆಗಳ ಮಾಹಿತಿಯನ್ನು ನೀಡುವ ವಸ್ತು ಪ್ರದರ್ಶನ ಹಮ್ಮಿಕೊಂಡಿರುವುದು ಶ್ಲಾಘನೀಯ. ಗೃಹಲಕ್ಷ್ಮೀ ಯೋಜನೆ ಮಹಿಳೆಯರನ್ನು ಆರ್ಥಿಕ ಸಬಲೀಕರಣದತ್ತ ದಿಟ್ಟ ಹೆಜ್ಜೆಯಾಗಿದೆ. ಹಸಿವು ಮುಕ್ತ ಕರ್ನಾಟಕ ಮಾಡುವ ದೃಢ ಸಂಕಲ್ಪದಿಂದ ಪ್ರತಿಯೊಬ್ಬ ಪಡಿತರದಾರರಿಗೆ ತಲಾ 10 ಕೆ ಜಿ ಆಹಾರ ಧಾನ್ಯ ಒದಗಿಸಲಾಗುತ್ತಿದೆ. ಗೃಹಜ್ಯೋತಿ ಯೋಜನೆಯಿಂದ ಉಚಿತ ಬೆಳಕು ನೀಡಿ ಸುಸ್ಥಿರ ಬದುಕನ್ನು ನಡೆಸಲು ಸಹಕಾರಿಯಾಗಿದೆ. ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ನಿಜವಾದ ಶಕ್ತಿ ಬಂದಿದೆ. ಯುವನಿಧಿಯಲ್ಲಿ ನೋಂದಣಿಯಾದ ಯುವಜನತೆಗೆ ಹಣ ನೀಡಲಾಗುತ್ತಿದೆ ಎಂದು ಹೇಳಿದರು.

ರೋಣ ತಾಲೂಕಿನ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಮಿಥನಗೌಡ ಪಾಟೀಲ ಮಾತನಾಡಿ, ಗ್ಯಾರಂಟಿ ಯೋಜನೆಗಳ ಜೊತೆಗೆ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಪ್ರಾರಂಭಿಸಿ ರಾಜ್ಯವನ್ನು ಪ್ರಗತಿಯತ್ತ ಮುನ್ನಡೆಸುತ್ತಿದ್ದು, ಗ್ಯಾರಂಟಿಯಿಂದ ಬಡವರಿಗೆ, ಯುವಕರಿಗೆ, ಮಹಿಳೆಯರಿಗೆ ಅನುಕೂಲವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರ್‌ಸಾಬ್ ಬಬರ್ಚಿ, ಗದಗ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಅಶೋಕ ಮಂದಾಲಿ, ನೀಲಮ್ಮ ಬೋಳಣ್ಣನವರ, ಬಸವರಾಜ ಕಡೇಮನಿ, ಶಂಭು ಕಾಳೆ, ಸಂಗಮೇಶ ಕೆರಕಲಮಟ್ಟಿ, ಸಾವಿತ್ರಿ ಹೂಗಾರ, ದೇವರಡ್ಡಿ ತಿರ್ಲಾಪುರ, ಗಣೇಶ ಮಟ್ಟಾಲಿ, ಸಂಗಮೇಶ ಹಾದಿಮನಿ, ವಾರ್ತಾಧಿಕಾರಿ ವಸಂತ ಮಡ್ಲೂರ, ಮಹಿಳಾ ಮತ್ತು ಮಕ್ಕಳ ನಿರೂಪಣಾಧಿಕಾರಿ ರಾಧಾ ಮಣ್ಣೂರು, ಹುಲಿಗೆಮ್ಮ ಜೋಗೆರ ಹಾಜರಿದ್ದರು.

ಮುಖ್ಯಮಂತ್ರಿಗಳೊಂದಿಗೆ ಸೆಲ್ಪಿ!

ವಸ್ತುಪ್ರದರ್ಶನದಲ್ಲಿ ನಾಡಿನ ಜನರ ಬದುಕು ಬೆಳಗಿಸಿದ ಗ್ಯಾರಂಟಿ ಯೋಜನೆಗಳ ಸಮಗ್ರ ಮಾಹಿತಿ, ಯಶೋಗಾಥೆಯನ್ನೊಳಗೊಂಡ ಗ್ಯಾರಂಟಿಯ ಸಮರ್ಪಣೆ, ಅಭಿವೃದ್ಧಿಯ ಸಂಕಲ್ಪದ 2 ವರ್ಷಗಳ ಸಾಧನಾ ಸಂಭ್ರಮದ ಪುಸ್ತಕವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೊಂದಿಗೆ ಪಡೆದುಕೊಳ್ಳುವಂತೆ ಬಿಂಬಿಸುವ ಸೆಲ್ಪಿ ಸಾರ್ವಜನಿಕರ ಗಮನ ಸೆಳೆಯಿತು.

“ಸರ್ಕಾರದ 2 ವರ್ಷದ ಸಾಧನೆ ಆಚರಣೆ ರಾಜ್ಯಾದ್ಯಂತ ಸಂತೋಷದಿಂದ ಆಚರಿಸಲಾಗಿದೆ. ಪಂಚ ಗ್ಯಾರಂಟಿ ಮೂಲಕ ಜನರಿಗೆ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದು ಜನರ ವಿಶ್ವಾಸ ಉಳಿಸಿಕೊಂಡಿದ್ದೇವೆ. ಗ್ಯಾರಂಟಿ ಯೋಜನೆ ಮೂಲಕ ಸಾಮಾನ್ಯ ಜನರಿಗೆ ಸ್ವಾಭಿಮಾನದ ಬದುಕನ್ನು ಕಟ್ಟುವಲ್ಲಿ ಯಶಸ್ವಿಯಾಗಿದ್ದೇವೆ. ಸಮ ಸಮಾಜ ನಿರ್ಮಾಣದ ಜೊತೆಗೆ ಆರ್ಥಿಕವಾಗಿ ಸಮಾನತೆ ಮೂಡಿದೆ”

– ಕೃಷ್ಣಗೌಡ ಎಚ್.ಪಾಟೀಲ.

ಗದಗ ತಾಲೂಕು ಗ್ಯಾರಂಟಿ ಯೋಜನೆಗಳ

ಅನುಷ್ಠಾನ ಪ್ರಾಧಿಕಾರದ ಸದಸ್ಯರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!