ದಾವಣಗೆರೆ:- ಆನ್ಲೈನ್ ಗೇಮ್ನಲ್ಲಿ ಬರೋಬ್ಬರಿ 18 ಲಕ್ಷ ಕಳೆದುಕೊಂಡ ಯುವಕನೋರ್ವ ಮನನೊಂದು ವಿಡಿಯೋ ಮಾಡಿಟ್ಟು ನೇಣಿಗೆ ಶರಣಾಗಿರುವ ಘಟನೆ ದಾವಣಗೆರೆಯ ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
25 ವರ್ಷದ ಶಶಿ ಕುಮಾರ್ ಮೃತ ಯುವಕ. ಯುವಕ ಆನ್ಲೈನ್ ಗೇಮ್ನಲ್ಲಿ 18 ಲಕ್ಷ ರೂ. ಕಳೆದುಕೊಂಡಿದ್ದ. ಇದರಿಂದ ನೊಂದು ಆನ್ಲೈನ್ ಗೇಮ್ ನಿಷೇಧಿಸುವಂತೆ ಪ್ರಧಾನಿ, ಮುಖ್ಯಮಂತ್ರಿಗಳಿಗೆ ಡಿಸಿ ಹಾಗೂ ಎಸ್ಪಿ ಮುಖಾಂತರ ಮನವಿ ಮಾಡಿಕೊಂಡಿದ್ದ. ದೂರು ನೀಡಿದರು ಯಾವುದೇ ಕ್ರಮವಾಗದ ಹಿನ್ನಲೆ ಸೆಲ್ಫಿ ವಿಡಿಯೋ ಮಾಡಿ ನೋವು ತೋಡಿಕೊಂಡಿದ್ದಾನೆ. ಬಳಿಕ ನೇಣಿಗೆ ಶರಣಾಗಿದ್ದಾನೆ.
ಡೆತ್ನೋಟ್ನಲ್ಲಿ ಗೇಮ್ನ ಅಕ್ರಮದ ಬಗ್ಗೆ ಯುವಕ ಅನಾವರಣ ಮಾಡಿದ್ದಾನೆ. ಅದರಲ್ಲಿ, ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರ ಹೆಸರು ಪ್ರಸ್ತಾಪ ಮಾಡಿ, ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾನೆ.



