ಪ್ರಕೃತಿಯನ್ನು ಉಳಿಸಿ ಭವಿಷ್ಯವನ್ನು ಬೆಳಗಿಸಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ. ಅದನ್ನು ಕಾಪಾಡಿಕೊಂಡು ಹೋಗುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಪ್ರಕೃತಿಯ ಮಡಿಲು ತಾಯಿಯ ಮಡಿಲಿಗೆ ಸಮಾನ. ಈ ತಾಯಿಯ ಮಡಿಲನ್ನು ತಂಪಾಗಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಮಲ್ಲಿಕಾರ್ಜುನ್ ಪೂಜಾರ ಹೇಳಿದರು.

Advertisement

ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆ ಹರ್ತಿಯಲ್ಲಿ ಪರಿಸರ ದಿನಾಚರಣೆ ನಿಮಿತ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಸಹಯೋಗದೊಂದಿಗೆ ಆಯೋಜಿಸಿದ್ದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಎಸ್.ಬಿ. ಕಣಗಿನಹಾಳ ಮಾತನಾಡಿ, ಪ್ರಕೃತಿ ನಮಗೆ ಏನು ಕೊಟ್ಟಿತು ಎಂಬುದಕ್ಕಿಂತ ಅದಕ್ಕೆ ನಾವು ಏನು ಕೊಟ್ಟೆವು ಎಂಬುದನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಅರ್ಥೈಸಿದರು.

ಮುಖ್ಯ ಅತಿಥಿಗಳಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಯೋಜನೆ ಬಿಸಿ ಟ್ರಸ್ಟ್ನ ಯೋಜನಾಧಿಕಾರಿ ಉಮಾ ಎನ್.ಜಿ ಪಾಲ್ಗೊಂಡಿದ್ದರು. ಕಿರಣ್ ಮಹೇಂದ್ರಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಶಿಕ್ಷಣಾರ್ಥಿ ರಾಜೇಶ್ವರಿ ಜಕ್ಕನಗೌಡ ಸ್ವಾಗತಿಸಿದರು. ಪ್ರಶಿಕ್ಷಣಾರ್ಥಿ ಅಶ್ವಿನಿ ದೇಸಾಯಿ ನಿರೂಪಿಸಿದರು. ಪ್ರಶಿಕ್ಷಣಾರ್ಥಿ ವಿರೇಶ, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.


Spread the love

LEAVE A REPLY

Please enter your comment!
Please enter your name here