ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ತೋಂಟದಾರ್ಯ ಕಲಾರಂಗದ ಸಹಯೋಗದಲ್ಲಿ ಜುಲೈ 4ರಂದು ಸಂಜೆ 6.30 ಗಂಟೆಗೆ ಗದುಗಿನ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಧಾತ್ರಿ ರಂಗಸಂಸ್ಥೆ ಸಿರಿಗೇರಿ ಇವರು `ಸೋರುತಿಹುದು ಸಂಬಂಧ’ ಎಂಬ ನಾಟಕವನ್ನು ಪ್ರದರ್ಶಿಸಲಿದ್ದಾರೆ.
ಆಧುನಿಕತೆಯ ಭರದಲ್ಲಿ, ಹೆಣ್ಣು, ಹೊನ್ನು, ಮಣ್ಣಿನ ವ್ಯಾಮೋಹಗಳಿಗೆ ಒಳಗಾಗುವ ಮನುಷ್ಯ, ತನ್ನೊಳಗಿನ ಮನುಷ್ಯತ್ವವನ್ನು ಮರೆತು, ಸಂಬಂಧಗಳಿಗೆ ಸ್ಪಂದಿಸದೆ ತನ್ನ ಯಾಂತ್ರಿಕ ಬದುಕನ್ನು ಮುಂದುವರೆಸುತ್ತಿದ್ದಾನೆ. ಅಂತಹ ಮನುಷ್ಯನ ಸಂಬಂಧಗಳ ಕೊರತೆ ಮತ್ತು ನಿರೀಕ್ಷೆಗಳನ್ನು ನಾಟಕ ಎಳೆ ಎಳೆಯಾಗಿ ಬಿಚ್ಚಿಡುತ್ತದೆ.
ರಂಗಾಸಕ್ತರು, ಪರಿಷತ್ತಿನ ಸದಸ್ಯರು, ಕನ್ನಡಾಭಿಮಾನಿಗಳು ಆಗಮಿಸಬೇಕೆಂದು ಕಾರ್ಯದರ್ಶಿ ಕಿಶೋರಬಾಬು ನಾಗರಕಟ್ಟಿ, ದತ್ತಪ್ರಸನ್ನ ಪಾಟೀಲ ಹಾಗೂ ಡಿ.ಎಸ್. ಬಾಪುರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.



