ಶಿವಮೊಗ್ಗ:- ತಾಂತ್ರಿಕ ಸಮಸ್ಯೆಯಿಂದ ಶರಾವತಿ ಹಿನ್ನೀರಿನ ನಡುವೆ ಲಾಂಚ್ ಕೆಟ್ಟು ನಿಂತಿರುವ ಘಟನೆ ಶರಾವತಿ ಹಿನ್ನೀರಿನ ಪ್ರದೇಶದ ಹೊಳೆಬಾಗಿಲಿನಲ್ಲಿ ಗುರುವಾರ ಜರುಗಿದೆ.
Advertisement
ನೂರಕ್ಕೂ ಹೆಚ್ಚು ಪ್ರಯಾಣಿಕರು ಹಾಗೂ ವಾಹನಗಳನ್ನು ಲಾಂಚಿನಲ್ಲಿ ತೆಗೆದುಕೊಂಡು ಹೋಗುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಇದರಿಂದ ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದರು. ಬಳಿಕ ಸೇತುವೆ ಕಾಮಗಾರಿಗೆ ಬಂದಿದ್ದ ಲಾಂಚ್ ಮೂಲಕ ಹಗ್ಗ ಕಟ್ಟಿ ಕೆಟ್ಟು ನಿಂತಿದ್ದ ಲಾಂಚ್ನ್ನು ದಡಕ್ಕೆ ತರಲಾಯಿತು.
ಮತ್ತೊಂದು ಲಾಂಚ್ ಹೋಗಲು ಸ್ವಲ್ಪ ತಡವಾಗುತ್ತಿದ್ದರು ಸಹ ಕೆಟ್ಟ ನಿಂತಿದ್ದ ಲಾಂಚ್ ಪಕ್ಕದಲ್ಲೇ ನಿರ್ಮಾಣಗೊಳ್ಳುತ್ತಿರುವ ಸಿಗಂದೂರು ಸೇತುವೆಯ ಪಿಲ್ಲರ್ಗೆ ಲಾಂಚ್ ಡಿಕ್ಕಿಯಾಗುವ ಸಾಧ್ಯತೆ ಇತ್ತು ಎನ್ನಲಾಗಿದೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.