ಕೊರೊನಾ; ನರಗುಂದ, ರೋಣ ತಾಲೂಕಿನಲ್ಲಿ ಭಾರಿ ಇಳಿಮುಖ, ಸೋಂಕು ಮುಕ್ತದತ್ತ ದಾಪುಗಾಲು!

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಗದಗ ಜಿಲ್ಲೆಯ ಜನರಿಗೆ ಸತತ ನಾಲ್ಕನೇ ದಿನವೂ ಶುಭ ಸುದ್ದಿ ಸಿಕ್ಕಿದೆ. ಹೌದು ಶುಕ್ರವಾರದಿಂದ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಇಳಿಮುಖದತ್ತ ಸಾಗಿದ್ದು, ಸೋಮವಾರ ಸಾವಿನ ಸಂಖ್ಯೆಯಲ್ಲೂ ಇಳಿಕೆಯಾಗಿದೆ. ಇದರಿಂದಾಗಿ ಜಿಲ್ಲೆಯ ಜನ ಒಂದಿಷ್ಟು ನಿರಾಳರಾದಂತಾಗಿದೆ. ಅದರಲ್ಲೂ ನರಗುಂದ ಹಾಗೂ ರೋಣ ತಾಲೂಕಿನಲ್ಲಿ ಸೋಂಕು ಭಾರಿ ಇಳಿಮುಖವಾಗಿದೆ.

ಇಂದು 141 ಜನರಿಗೆ ಸೋಂಕು ತಗುಲಿದೆ. ಇಂದು ಜಿಲ್ಲಾಡಳಿತದ ಮಾಹಿತಿ ಪ್ರಕಾರ ಇಬ್ಬರು ಮೃತಪಟ್ಟಿದ್ದಾರೆ.

ಇಂದಿನ 141 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 24934 ಕ್ಕೆ ಏರಿಕೆ ಕಂಡಿದೆ.

ಗದಗ ನಗರ ಹಾಗೂ ತಾಲೂಕಿನಲ್ಲಿ -81, ಮುಂಡರಗಿ-21, ನರಗುಂದ-01, ರೋಣ-05, ಶಿರಹಟ್ಟಿ-30, ಹೊರಜಿಲ್ಲೆಯ-03 ಸೇರಿದಂತೆ 141 ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲಾಡಳಿತ ಹೊರಡಿಸಿದ ಮಾಹಿತಿಯಂತೆ ಇಬ್ಬರು ಮೃತಪಟ್ಟಿದ್ದು, ಮೃತರ ಸಂಖ್ಯೆ 275 ಕ್ಕೇರಿದೆ.

ಗದಗ ತಾಲೂಕಿನ ಹೊಂಬಳ ನಿವಾಸಿ 88 ವರ್ಷದ ವ್ಯಕ್ತಿ ಜೂನ್- 04 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ನಿಂದಾಗಿ ಜೂನ -06 ರಂದು ಮೃತಪಟ್ಟಿದ್ದಾರೆ.

ಗದಗ ತಾಲೂಕಿನ ಹೊಂಬಳ ನಿವಾಸಿ 78 ವರ್ಷದ ಮಹಿಳೆ ಮೇ-22 ಜಿಮ್ಸ್ ‌ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ದೃಢಪಟ್ಟಿತ್ತು, ಜೂನ್ 06 ರಂದೇ ಮೃತಪಟ್ಟಿದ್ದಾರೆ.

ಇವರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇಂದು 301 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 23106 ಜನರು ‌ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.

ಇಂದು ಜಿಲ್ಲೆಯಲ್ಲಿ 1554 ಪ್ರಕರಣಗಳು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ 150 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.


Spread the love

LEAVE A REPLY

Please enter your comment!
Please enter your name here