ವಿಜಯಸಾಕ್ಷಿ ಸುದ್ದಿ, ನವದೆಹಲಿ
ಭಾರತೀಯ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರರಾದ ಸೈನಾ ನೆಹ್ವಾಲ್ ಮತ್ತು ಕಿದಂಬಿ ಶ್ರೀಕಾಂತ್ ಒಲಂಪಿಕ್ಸ್ ನಿಂದ ಹೊರಗೆ ಬಿದ್ದಿದ್ದು, ಭಾರತೀಯರಿಗೆ ನಿರಾಸೆ ಮೂಡಿಸಿದೆ. ಜೂನ್ 15ಕ್ಕೆ ಟೋಕಿಯೋ ಒಲಿಂಪಿಕ್ಸ್ 2021ರ ಅರ್ಹತೆಗೆ ಕೊನೆಯ ದಿನಾಂಕ ಮುಗಿಯಲಿದೆ. ಆದರೆ, ಇದರ ಮಧ್ಯೆ ಯಾವುದೇ ಅರ್ಹತಾ ಪಂದ್ಯಗಳು ನಡೆಯುತ್ತಿಲ್ಲ. ಹೀಗಾಗಿ ಸೈನಾ ನೆಹ್ವಾಲ್ ಮತ್ತು ಕಿದಂಬಿ ಶ್ರೀಕಾಂತ್ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಬ್ಯಾಡ್ಮಿಂಟನ್ ಫೆಡರೇಶನ್ ಆಫ್ ಇಂಡಿಯಾ ತಿಳಿಸಿದೆ.
ಟೋಕಿಯೋ ಒಲಿಂಪಿಕ್ಸ್ ಗೆ ಸಂಬಂಧಿಸಿದಂತೆ ಯಾವುದೇ ಅರ್ಹತಾ ಪಂದ್ಯಗಳು ನಡೆಯುತ್ತಿಲ್ಲ. ಜೂ.15ಕ್ಕೆ ಅರ್ಹತೆಗೆ ಕೊನೆಯ ಕೊನೆಯ ದಿನ ಮುಗಿಯಲಿದೆ. ಲಂಡನ್ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ವಿಜೇತ ಸೈನಾ ನೆಹ್ವಾಲ್ ಗೆ ಇದರಿಂದಾಗಿ ತುಂಬಾ ನಿರಾಸೆಯಾಗಿದೆ. ಭಾರತೀಯರು ಕೂಡ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಭಾರತಕ್ಕೆ ಪದಕದ ಭರವಸೆ ಮೂಡಿಸುವ ಆಟಗಾರರೆ ಇಲ್ಲವಾಯಿತಲ್ಲ ಎಂಬುವುದು ನೂರು ಕೋಟಿ ಜನರ ಸದ್ಯದ ಬೇಸರವಾಗಿದೆ.