ಹೃದಯಾಘಾತ: ವೈದ್ಯರಿಲ್ಲದೇ ಉಸಿರು ಚಲ್ಲಿದ ವ್ಯಕ್ತಿ!

0
Spread the love

ನೆಲಮಂಗಲ:- ನೆಲಮಂಗಲ ವಿಧಾನಸಭಾ ಕ್ಷೇತ್ರದ ಸೋಲೂರು ಸರ್ಕಾರಿ ಆಸ್ಪತ್ರೆಯಲ್ಲಿ ವ್ಯೆದ್ಯರಿಲ್ಲದೇ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ವೆಂಕಟೇಶ್ (55) ಮೃತ ವ್ಯಕ್ತಿ.

Advertisement

ಹಾಸನದಿಂದ ಬೆಂಗಳೂರಿನಲ್ಲಿ ವಾಸವಿದ್ದ ಮಗಳನ್ನು ನೋಡಲು ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ವ್ಯಕ್ತಿಗೆ ಹೃದಯಾಘಾತವಾಗಿದೆ. ಕೂಡಲೇ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಹಾಗೂ ಸ್ಥಳೀಯರು ಸೋಲೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ನರ್ಸ್ ಪ್ರಥಮ ಚಿಕಿತ್ಸೆ ಮಾಡಿ ನೆಲಮಂಗಲ ತಾಲೂಕು ಆಸ್ಪತ್ರೆಗೆ ರವಾನೆ ಮಾಡಿದ್ದು, ದಾರಿ ಮಧ್ಯೆ ಹೃದಯಾಘಾತಕ್ಕೆ ವ್ಯಕ್ತಿ ಬಲಿಯಾಗಿದ್ದಾರೆ.


Spread the love

LEAVE A REPLY

Please enter your comment!
Please enter your name here