ಜುಲೈ 12ರಂದು ಯುವ ಕಾಂಗ್ರೆಸ್ ಪದಗ್ರಹಣ ಸಮಾರಂಭ

0
Spread the love

ವಿಜಯಸಾಕ್ಷಿ ಸುದ್ದಿ, ರೋಣ: ಜುಲೈ 12ರಂದು ಬೆಳಿಗ್ಗೆ 11ಕ್ಕೆ ಗದಗ ನಗರದ ಸ್ವಾಮಿ ವಿವೇಕಾನಂದ ಸಬಾಭವನದಲ್ಲಿ ಜರುಗುವ ಯುವ ಕಾಂಗ್ರೆಸ್ ಪದಗ್ರಹಣ ಸಮಾರಂಭಕ್ಕೆ ರೋಣ ತಾಲೂಕಿನಿಂದ 10ಸಾವಿರ ಯುವಕರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ತಾಲೂಕಾ ಯುವ ಕಾಂಗ್ರೆಸ್ ಅಧ್ಯಕ್ಷ ಮುತ್ತುರಾಜ ನವಲಗುಂದ ಹೇಳಿದರು.

Advertisement

ಅವರು ಗುರುವಾರ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದರು.

ಗದಗ ಜಿಲ್ಲಾ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದ ಕೃಷ್ಣಗೌಡ ಎಚ್.ಪಾಟೀಲ, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಅಕ್ಷಯ ಪಾಟೀಲ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕವಾದ ಯುವ ಮುಖಂಡರುಗಳ ಪದಗ್ರಹಣ ಸಮಾರಂಭ ಇದಾಗಿದೆ.

ಪದಗ್ರಹಣ ಸಮಾರಂಭಕ್ಕೆ ಸಚಿವರಾದ ಪ್ರಿಯಾಂಕ ಖರ್ಗೆ, ಸಚಿವರಾದ ಸಂತೋಷ ಲಾಡ್, ಎಚ್.ಕೆ. ಪಾಟೀಲ, ಶಾಸಕ ಜಿ.ಎಸ್.ಪಾಟೀಲ ಸೇರಿದಂತೆ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಅನೇಕ ಮುಖಂಡರು ಆಗಮಿಸಲಿದ್ದಾರೆ. ಪಕ್ಷದ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅನೇಕ ಯುವ ನಾಯಕರು ಸಹ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ತಾಲೂಕಿನ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಬೇಕು ಎಂದು ಕರೆ ನಿಡಿದರು.

ಉಪಾಧ್ಯಕ್ಷ ಅಸ್ಲಂ ಕೊಪ್ಪಳ, ಶಹರ ಘಟಕದ ಅಧ್ಯಕ್ಷ ಯಲ್ಲಪ್ಪ ಕಿರೇಸೂರ, ಉಪಾಧ್ಯಕ್ಷ ಗೋಪಿ ರಾಯನಗೌಡ್ರ, ಬ್ಲಾಕ್ ಕಮಿಟಿ ಉಪಾಧ್ಯಕ್ಷ ಸೋಮು ನಾಗರಾಜ, ಅಭಿಷೇಕ ನವಲಗುಂದ, ಆನಂದ ರಾಠೋಡ, ಬಶೀರ ಕಟ್ಟಿಮನಿ, ವಿನಾಯಕ ಜಕ್ಕನಗೌಡ್ರ, ಅಪ್ಪುರಾಜ ನವಲಗುಂದ, ಬಸವರಾಜ ಹೊಸಳ್ಳಿ, ಅಬ್ಬು ಹೊಸುರ, ಮಹೇಶ ಕಳಸಣ್ಣವರ ಸೇರಿದಂತೆ ಕಾಂಗ್ರೆಸ್ ಪಕ್ಷದ ಯುವ ಮುಖಂಡರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here