ಬೆಂಗಳೂರು: ಅಮೃತಧಾರೆ, ಸೇರಿದಂತೆ ಹಲವು ಸೀರಿಯಲ್ ಗಳಲ್ಲಿ ನಟಿಸಿದ್ದ ಕಿರುತೆರೆ ನಟಿಗೆ ಚಾಕು ಇರಿದ ಘಟನೆ ಬೆಂಗಳೂರಿನ ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ ಲೇಔಟ್ ನಲ್ಲಿ ನಡೆದಿದೆ. ಮಂಜುಳ @ಶೃತಿ ಚಾಕು ಇರಿತಕ್ಕೋಳಗಾದ ಕಿರುತೆರೆ ನಟಿಯಾಗಿದ್ದು, ಶೀಲ ಶಂಕಿಸಿ ಹಲ್ಲೆ ನಡೆದಿದೆ.
ಅಮೃತಧಾರೆ, ಸೇರಿದಂತೆ ಹಲವು ಸೀರಿಯಲ್ ಗಳಲ್ಲಿ ಶೃತಿ ನಟಿಸಿದ್ದಾರೆ. ಅಂಬರೀಶ್ ಎಂಬಾತನನ್ನು ಮಂಜುಳ ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರು ಮಕ್ಕಳು ಕೂಡ ಇದ್ದರು. ಹನುಮಂತ ನಗರದಲ್ಲಿ ಲೀಸ್ ಗೆ ಮನೆ ಪಡೆದು ವಾಸವಿದ್ದ ದಂಪತಿ ನಡುವೆ ಹೊಂದಾಣಿಕೆ ಸರಿಯಿರಲಿಲ್ಲ, ಹೀಗಾಗಿ ಮಂಜುಳ ಗಂಡನಿಂದ ದೂರಾಗಿ ಅಣ್ಣನ ಮನೆಯಲ್ಲಿದ್ದರು.
ಕಳೆದ ಏಪ್ರಿಲ್ ನಲ್ಲಿ ಇಬ್ಬರ ನಡುವೆ ಲೀಸ್ ಹಣಕ್ಕಾಗಿ ಸಹ ಜಗಳ ನಡೆದಿತ್ತು. ಈ ಬಗ್ಗೆ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ದೂರು ಕೂಡ ನೀಡಿದ್ದರು. ಇದಾದ ಬಳಿಕ ಕಳೆದ ಗುರುವಾರ ರಾಜಿ ಸಂದಾನ ಮಾಡಿ ಒಂದಾಗಿದ್ದರು. ಆದ್ರೆ ಇಬ್ಬರು ಒಂದಾದ ಮಾರನೇ ದಿನವೇ ಹೆಂಡತಿಗೆ ಚಾಕು ಇರಿದಿದ್ದಾನೆ. ಕಳೆದ ಶುಕ್ರವಾರ ಮಕ್ಕಳು ಕಾಲೇಜಿಗೆ ಹೋದ ನಂತರ ಹೆಂಡತಿ ಮೇಲೆ ಹಲ್ಲೆ ಮಾಡಿದ್ದು,
ಪೆಪ್ಪರ್ ಸ್ಪ್ರೇ ಹೊಡೆದು ಸಿನಿಮಾ ಸ್ಟೈಲ್ ನಲ್ಲಿ ತಲೆ ಕೂದಲು ಹಿಡಿದು ಗೋಡೆ ತಲೆ ಗುದ್ದಿಸಿ ಕೊಲೆಗೆ ಯತ್ನ ಮಾಡಲಾಗಿದ್ದು, ಘಟನೆ ಸಂಬಂಧ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿ ಆರೋಪಿಯನ್ನು ಬಂಧಿಸಲಾಗಿದೆ. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಂಜುಳ @ಶೃತಿ ಚಿಕಿತ್ಸೆ ಪಡೆಯುತ್ತಿದ್ದಾರೆ.