ಮುಂದುವರೆದ ಹೃದಯಾಘಾತ: ಬೆಳಗಾವಿಯಲ್ಲಿ ಕುಸಿದು ಬಿದ್ದು ಯೋಧ ಸಾವು.!

0
Spread the love

ಬೆಳಗಾವಿ: ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಅದರಲ್ಲೂ ಹಾಸನದಲ್ಲಿ ಹೆಚ್ಚಾಗುತ್ತಿರುವ ಸಾವಿನ ಸರಣಿ ಜನರನ್ನು ಆತಂಕಕ್ಕೆ ದೂಡಿತ್ತು.  ಇದೀಗ ರಜೆಗೆಂದು ಊರಿಗೆ ಬಂದಿದ್ದ ಯೋಧ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಗಾವಿ ನಗರದ ಅನಗೋಳದ ಬಜಾರ್‌ನಲ್ಲಿ ನಡೆದಿದೆ.

Advertisement

ಇಬ್ರಾಹಿಂ ದೇವಲಾಪುರ (37) ಮೃತ ಯೋಧನಾಗಿದ್ದು, ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯೋಧ ರಜೆಗೆಂದು ಊರಿಗೆ ಬಂದಿದ್ದರು.

ಈ ವೇಳೆ ಅನಗೋಳದ ಬಜಾರ್‌ಗೆ ತೆರಳಿದ್ದಾಗ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು, ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅಲ್ಲಿದ್ದ ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ.


Spread the love

LEAVE A REPLY

Please enter your comment!
Please enter your name here