ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಾಹಿತ್ಯ ಚಿಂತನ ಮಾಲಿಕೆಯಲ್ಲಿ ಜುಲೈ 12ರಂದು ಸಂಜೆ 6.30 ಗಂಟೆಗೆ ತೋಂಟದ ಸಿದ್ಧಲಿಂಗಶ್ರೀಗಳ ಕನ್ನಡ ಭವನ, ಕಸಾಪ ಕಾರ್ಯಾಲಯದಲ್ಲಿ ವಚನ ಸಾಹಿತ್ಯ ಸಂಶೋಧನಾ ಪಿತಾಮಹ ಫ.ಗು. ಹಳಕಟ್ಟಿ ಅವರ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ವಚನ ಸಾಹಿತ್ಯದ ಸಂರಕ್ಷಣೆಗೆ ಫ.ಗು. ಹಳಕಟ್ಟಿ ಅವರ ಕೊಡುಗೆ ಕುರಿತು ಶರಣ ಸಂಸ್ಕೃತಿ ಚಿಂತಕರಾದ ಗೌರಕ್ಕ ಬಡಿಗಣ್ಣವರ ಉಪನ್ಯಾಸ ನೀಡುವರು. ಅಧ್ಯಕ್ಷತೆಯನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ವಿವೇಕಾನಂದಗೌಡ ಪಾಟೀಲ ವಹಿಸುವರು. ಮುಖ್ಯ ಅತಿಥಿಗಳಾಗಿ ಶರಣ ಸಂಸ್ಕೃತಿ ಚಿಂತಕರಾದ ಶಿವಲೀಲಾ ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಸಾಹಿತ್ಯಾಭಿಮಾನಿಗಳು, ಸಾಹಿತಿಗಳು, ಪರಿಷತ್ತಿನ ಸದಸ್ಯರು ಭಾಗವಹಿಸಬೇಕೆಂದು ಕಿಶೋರಬಾಬು ನಾಗರಕಟ್ಟಿ, ದತ್ತಪ್ರಸನ್ನ ಪಾಟೀಲ, ಡಿ.ಎಸ್. ಬಾಪುರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.